ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಯುಗಾದಿ, ರಂಜಾನ್ ಶಾಂತಿ ಸೌಹಾರ್ದತೆ ಹಬ್ಬ ಆಚರಿಸಿ, ಶಾಂತಿ ಕದಡಿದ್ರೆ ಕಠಿಣ ಕ್ರಮ: ಡಿಸಿ ವಾರ್ನಿಂಗ್!

On: March 26, 2025 10:31 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:26-03-2025

ದಾವಣಗೆರೆ: ಯುಗಾದಿ ಮತ್ತು ರಂಜಾನ್ ಹಬ್ಬ ಆಚರಣಾ ಸಂದರ್ಭದಲ್ಲಿ ಸಡಗರ, ಶಾಂತಿ, ಸೌಹಾರ್ದತೆಯನ್ನು ಮೆರೆಯಬೇಕು, ಆದರೆ ಶಾಂತಿ ಕದಡುವ ಕೆಲಸಕ್ಕೆ ಕೈಹಾಕಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ತಿಳಿಸಿದರು.

ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಏರ್ಪಡಿಸಲಾದ ನಾಗರಿಕ ಸೌಹಾರ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಅಧಿಕಾರಿಗಳು ಸಹ ನಮ್ಮ ಧರ್ಮ, ಸಮುದಾಯದವರು ಎಂಬ ಕಾರಣಕ್ಕೆ ಯಾರನ್ನು ರಕ್ಷಿಸಬಾರದು, ಯಾರೇ ತಪ್ಪು ಮಾಡಿದರೂ ಎಲ್ಲರನ್ನು ಒಂದೇ ದೃಷ್ಟಿಯಲ್ಲಿ ನೋಡಿ ಕ್ರಮ ಕೈಗೊಳ್ಳಬೇಕು. ಕೆಲವು ಕಿಡಿಗೇಡಿಗಳು ವೈಯಕ್ತಿಕ ಕಲಹ ಅಥವಾ ಸಣ್ಣ ಘಟನೆಗಳನ್ನು ದೊಡ್ಡದಾಗಿ ಬಿಂಬಿಸಿ ಸಾಮರಸ್ಯ ಕದಡುವಂತಹ ಕೆಲಸ ಮಾಡುವವರ ಬಗ್ಗೆ ಸಮುದಾಯದವರೇ ಮಾಹಿತಿ ನೀಡದರೆ ಹಬ್ಬ ಮತ್ತಷ್ಟು ಶಾಂತಿಯುತವಾಗಿ ಆಚರಿಸಲು ಸಹಕಾರಿಯಾಗುತ್ತದೆ. ಎಲ್ಲಾ ಸಮುದಾಯದವರು ಒಂದೇ ತಾಯಿ ಮಕ್ಕಳಂತೆ ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಿದರು.

ಮುಸ್ಲಿಂ ಸಮುದಾಯದ ಮುಖಂಡರೊಬ್ಬರು ಮಾತನಾಡಿ, ನಗರದಲ್ಲಿ ಇಲ್ಲಿಯವರೆಗೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ನಾವು ಕೂಡ ಸದಾ ಇಲಾಖೆ ಜೊತೆಗೆ ಕೈ ಜೋಡಿಸುತ್ತೇವೆ ಎಂದು ವಾಗ್ದಾನ ನೀಡಿದರು.

ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಮಾತನಾಡಿ ಯುಗಾದಿ ಹಬ್ಬ ಮಾರ್ಚ್ 30 ರಂದು ಹಾಗೂ ರಂಜಾನ್ ಹಬ್ಬ ಮಾರ್ಚ್ 31 ರಂದು ನಡೆಯಲಿದೆ. ಈ ಎರಡು ಹಬ್ಬಗಳು ಬಹಳ ವಿಶೇಷವಾಗಿದ್ದು ಯುಗಾದಿ ಮರುದಿನ ರಂಜಾನ್ ಬರುವುದರಿಂದ ಯುಗಾದಿ ಹೊಸ ವರ್ಷ ಹಬ್ಬ ಆಚರಿಸಿ ಚಂದ್ರನನ್ನು ನೋಡಲಾಗುತ್ತದೆ. ರಂಜಾನ್ ಹಬ್ಬವನ್ನು ಚಂದ್ರ ದರ್ಶನ ನಂತರ ಆಚರಿಸಲಾಗುತ್ತದೆ. ಆದ್ದರಿಂದ ಈ ಎರಡೂ ಹಬ್ಬಗಳು ಬಹಳ ಪವಿತ್ರವಾಗಿವೆ ಎಂದರು.

ಈ ಹಬ್ಬಗಳನ್ನು ಶಾಂತಿಯುತವಾಗಿ, ಸಡಗರಿಂದ ಆಚರಿಸಬೇಕಾಗಿದೆ. ಈ ವೇಳೆ ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಎಲ್ಲಾ ಪೊಲೀಸ್ ಠಾಣೆಗಳಲ್ಲೂ ಸೌಹಾರ್ದ ಸಭೆ ನಡೆಸಿ ತಿಳುವಳಿಕೆ ಮೂಡಿಸಲಾಗುತ್ತದೆ. ಹಬ್ಬದ ವೇಳೆ ಸಾರ್ವಜನಿಕ ಶಾಂತಿ ಕದಡುವ ಕೆಲಸಕ್ಕೆ ಕೈಹಾಕಿದಲ್ಲಿ ಅಂತಹ ಜನರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಯಾವುದೇ ಸಮುದಾಯದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಅನ್ಯ ಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವಂತಿಲ್ಲ. ಹಾಗೆಯೇ ಹಬ್ಬದ ಸಮಯದಲ್ಲಿ ಯುವಕರು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸದೇ ನಿಯಮಾನುಸಾರ ವಾಹನ ಚಲಾಯಿಸಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿ ಅಹಿತಕರ ಘಟನೆಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಯಾವುದೇ ರೀತಿಯ ಘಟನೆಗಳು ನಡೆಯದಂತೆ ಇಲಾಖೆ ವತಿಯಿಂದ ಸೂಕ್ತ ಕ್ರಮ ವಹಿಸಲಾಗುವುದು. ಒಟ್ಟಾರೆ ಹಬ್ಬಗಳು ಶಾಂತಿಯುತವಾಗಿ ಆಚರಿಸಬೇಕು ಎಂಬುದೇ ಈ ಸಭೆಯ ಆಶಯವಾಗಿದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ್, ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯದ, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment