SUDDIKSHANA KANNADA NEWS/ DAVANAGERE/ DATE-29-04-2025
ದಾವಣಗೆರೆ: ಜಿಲ್ಲೆಯ ಯಾವ ಭಾಗದಲ್ಲಿಯೂ ಬಾಲ್ಯ ವಿವಾಹಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.
ಏಪ್ರಿಲ್ 30ರಂದು ಅಕ್ಷಯ ತೃತೀಯ ದಿನವಾಗಿದ್ದು, ಜಿಲ್ಲೆಯಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುವ ಸಂಭವವಿದೆ.
ಅಂತಹ ಸಂದರ್ಭಗಳಲ್ಲಿ ಅಪ್ರಾಪ್ತ ವಯಸ್ಸಿನವರ ವಿವಾಹಗಳು ಜರುಗುವ ಸಾಧ್ಯತೆ ಅಧಿಕವಾಗಿವೆ. ಹೀಗಾಗಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ -2016ರ ಸೆಕ್ಷನ್ -13(4) ರಂತೆ ವಿವಾಹಗಳನ್ನು ತಡೆಗಟ್ಟುವ ಅಧಿಕಾರವಿದೆ. ಇದನ್ನು ಅಧಿಕಾರಿಗಳು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.