SUDDIKSHANA KANNADA NEWS/ DAVANAGERE/ DATE:07-01-2024
ಲಖಿಂಪುರ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಕಬ್ಬಿನ ಗದ್ದೆಯಲ್ಲಿ ಚಿತ್ರಹಿಂಸೆ ನೀಡಿ 13 ವರ್ಷದ ಬಾಲಕಿಯನ್ನು ಹತ್ಯೆ ಮಾಡಲಾಗಿದ್ದು, ವಿರೂಪಗೊಂಡ ಶವ ಪತ್ತೆಯಾಗಿದೆ.
ಮೂಲಗಳ ಪ್ರಕಾರ ಬಾಲಕಿ ಶಾಲೆಯಿಂದ ಹಿಂತಿರುಗುವ ವೇಳೆ ನಾಪತ್ತೆಯಾಗಿದ್ದಾಳೆ. ತಡರಾತ್ರಿಯಾದರೂ ಆಕೆ ವಾಪಸ್ ಬಾರದೆ ಇರುವುದರಿಂದ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರೂ ಪೊಲೀಸರು ದೂರು
ದಾಖಲಿಸಿಕೊಂಡಿರಲಿಲ್ಲ. ಮರುದಿನ ಬೆಳಿಗ್ಗೆ ಗ್ರಾಮಸ್ಥರು ಬಾಲಕಿಯ ಛಿದ್ರಗೊಂಡ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು, ಬಾಲಕಿಯ ಕಣ್ಣುಗಳನ್ನು ಹೊರತೆಗೆಯಲಾಯಿತು ಎಂದು ಅವರು ಹೇಳಿದರು.

ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ದೂರು ದಾಖಲಿಸಿಕೊಂಡಿದ್ದಾರೆ. ಲಖಿಂಪುರ ಖೇರಿ ಪೊಲೀಸ್ ವರಿಷ್ಠಾಧಿಕಾರಿ ಗಣೇಶ್ ಪ್ರಸಾದ್ ಸಹ ಸ್ಥಳಕ್ಕೆ
ಆಗಮಿಸಿ, ಪರಿಶೀಲನೆ ನಡೆಸಿದರು. ಆರೋಪಿಗಳ ಪತ್ತೆಗೆ ಮೂರು ತನಿಖಾ ತಂಡಗಳನ್ನು ರಚಿಸಿದರು.
ಪೊಲೀಸರ ನಿರ್ಲಕ್ಷ್ಯವೇ ಆಕೆಯ ಸಾವಿಗೆ ಕಾರಣವಾಯಿತು ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಪೊಲೀಸರು ಸಮಯಕ್ಕೆ ಸರಿಯಾಗಿ ದೂರು ದಾಖಲಿಸಿದ್ದರೆ, ಎರಡು ದಿನಗಳಿಂದ ಕಾಣೆಯಾಗಿದ್ದ ಬಾಲಕಿಯನ್ನು ರಕ್ಷಿಸಬಹುದಿತ್ತು ಎಂದು ಅವರು ಹೇಳಿದರು.
ಪ್ರಾಥಮಿಕವಾಗಿ, ಸಾಕಷ್ಟು ಗಾಯದ ಗುರುತುಗಳು ಗೋಚರಿಸಿರುವುದರಿಂದ ಬಾಲಕಿಯನ್ನು ಹೊಡೆದು ಕೊಂದಂತೆ ತೋರುತ್ತಿದೆ, ಆದರೆ ಮರಣೋತ್ತರ ಪರೀಕ್ಷೆಯ ನಂತರ ನಾವು ಸತ್ಯವನ್ನು ಕಂಡುಹಿಡಿಯುತ್ತೇವೆ. ನಾವು ಹತ್ತಿರದ ಪೊಲೀಸ್ ಠಾಣೆಗಳಿಂದ ಕಣ್ಗಾವಲು ತಂಡಗಳು ಮತ್ತು ವಿಶೇಷ ತಂಡ ರಚಿಸಲಾಗಿದೆ. ನಾವು ಬಾಲಕಿ ಸಾವಿಗೆ ಕಾರಣ ಏನು ಎಂದು ಪತ್ತೆ ಹಚ್ಚಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
”ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗಿದೆ. ಅವರು ಇದೀಗ ಯಾರ ಹೆಸರನ್ನೂ ಹೇಳಿಲ್ಲ ಎಂದು ತಿಳಿಸಿದರು.