ನವದೆಹಲಿ: ದಕ್ಷಿಣ ದೆಹಲಿಯ ಗ್ರೀನ್ ಪಾರ್ಕ್ನಲ್ಲಿರುವ ತಮ್ಮ ನಿವಾಸದಲ್ಲಿ 30 ವರ್ಷದ ನ್ಯಾಯಾಧೀಶರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಕರ್ಕರ್ಡೂಮಾ ನ್ಯಾಯಾಲಯದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (ಡಿಎಲ್ಎಸ್ಎ) ಕಾರ್ಯದರ್ಶಿಯಾಗಿದ್ದ ಅಮನ್ ಕುಮಾರ್ ಶರ್ಮಾ ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಅಮನ್ ಕುಮಾರ್ ಅವರು ತಮ್ಮ ಮನೆಯ ಬಾತ್ರೂಮ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಕುಟುಂಬದ ಆರೋಪ:
ಅಮನ್ ಅವರ ಸಾವು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ, ಅವರ ಕುಟುಂಬವು ಗಂಭೀರ ಆರೋಪಗಳನ್ನು ಮಾಡಿದೆ. ಮೃತ ನ್ಯಾಯಾಧೀಶರ ತಂದೆಯ ಪ್ರಕಾರ, ಘಟನೆಗೆ ಕೆಲವು ಗಂಟೆಗಳ ಮೊದಲು ಅಮನ್ ತಮಗೆ ಕರೆ ಮಾಡಿ, “ನನಗೆ ಬದುಕುವುದು
ಕಷ್ಟವಾಗುತ್ತಿದೆ, ನಾನು ತುಂಬಾ ತೊಂದರೆಯಲ್ಲಿದ್ದೇನೆ” ಎಂದು ಅತ್ತಿದ್ದರು. ಕಳೆದ ಎರಡು ತಿಂಗಳಿಂದ ಪತ್ನಿಯೊಂದಿಗೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂದು ಕುಟುಂಬದವರು ದೂರಿದ್ದಾರೆ.
ಅಮನ್ ಅವರ ಪತ್ನಿ ಕೂಡ ನ್ಯಾಯಾಂಗ ಅಧಿಕಾರಿಯಾಗಿದ್ದಾರೆ.
ತನಿಖೆ ಚುರುಕು:
ಬಾತ್ರೂಮ್ ಕಿಟಕಿ ಗಾಜನ್ನು ಒಡೆದು ಒಳಗಡೆ ಪ್ರವೇಶಿಸಿದಾಗ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಕೌಟುಂಬಿಕ ಕಲಹ ಮತ್ತು ಮಾನಸಿಕ ಒತ್ತಡದ ಆಯಾಮದಲ್ಲಿ ತನಿಖೆ ಮುಂದುವರೆದಿದೆ.





Leave a comment