ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಅತ್ಯಾಚಾರಿ ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹ: ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದಿಂದ ಪ್ರತಿಭಟನೆ

On: June 4, 2023 11:27 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:04-06-2023

ದಾವಣಗೆರೆ(DAVANAGERE): ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಬಿಜೆಪಿ (BJP) ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (BRIJ BHOOSHAN SING)ಅವರನ್ನು ಕೂಡಲೇ ಬಂಧಿಸಿ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ದಾವಣಗೆರೆ (DAVANAGERE) ಜಿಲ್ಲಾ ಕ್ರೀಡಾಪಟುಗಳ ಸಂಘ ಒತ್ತಾಯಿಸಿದೆ.

ಜಿಲ್ಲಾ ಯುವ ಜನ ಸೇವೆ ಮತ್ತು ಕ್ರೀಡಾ ಇಲಾಖೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದಾವಣಗೆರೆ (DAVANAGERE) ಜಿಲ್ಲಾ ಕ್ರೀಡಾಪಟುಗಳ ಸಂಘದ ಪದಾಧಿಕಾರಿಗಳು ಮತ್ತು ಕ್ರೀಡಾಪಟುಗಳು ಬಿಜೆಪಿ ಸಂಸದ ಮತ್ತು ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಕೇಂದ್ರ ಸರ್ಕಾರ (CENTRAL GOVERNMENT)ರಕ್ಷಿಸುತ್ತಿದ್ದು, ರಾಷ್ಟ್ರಪತಿಗಳು ಈ ಕೂಡಲೇ ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಮಾತನಾಡಿ 40ಕ್ಕೂ ಹೆಚ್ಚು ದಿನಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಸೌಜನ್ಯಕ್ಕಾದರೂ ಸಹ ಕೇಂದ್ರ ಸರ್ಕಾರದ ಯಾವೊಬ್ಬ ಸಚಿವರು ಸಹ ಇದುವರೆಗೂ ಸಮಸ್ಯೆ ಆಲಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಕೇಂದ್ರ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ದೂರಿದರು.

ನಗರಸಭೆ ಮಾಜಿ ಅಧ್ಯಕ್ಷ ಕೆ.ಜಿ.ಶಿವಕುಮಾರ್ ಮಾತನಾಡಿ ಜಾಗತಿಕ ನಾಯಕ ಎಂದು ಹೇಳಿಕೊಳ್ಳುವ ಮೋದಿ (MODI) ಅವರು ಅಂತರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಯನ್ನು ಹಾಳುಮಾಡಿದ್ದಾರೆ. 176 ದೇಶಗಳ ವಿಶ್ವ ಕುಸ್ತಿ ಒಕ್ಕೂಟ ಭಾರತಕ್ಕೆ ನಿಷೇಧದ ಎಚ್ಚರಿಕೆ ನೀಡಿದ್ದು, ಏಷ್ಯನ್ ಚಾಂಪಿಯನ್‌ಶಿಪ್ ಈಗಾಗಲೇ ಭಾರತದಿಂದ ದೂರ ಸರಿದಿದೆ. ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ ಭಾರತದ ಕುಸ್ತಿ ಒಕ್ಕೂಟದ ಮೇಲೆ ನಿಷೇಧ ಹೇರಿದರೆ ಒಲಿಂಪಿಯನ್‌ಗಳು ತಟಸ್ಥ ಧ್ವಜದಡಿಯಲ್ಲಿ ಆಡಬೇಕಾಗಲಿದೆ ಎಂದು ಎಚ್ಚರಿಸಿದರು.

ಮಹಿಳಾ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಮಾತನಾಡಿ ಮೋದಿಯವರು ‘ಬೇಟಿ ಬಚಾವೋ ಬೇಟಿ ಪಡಾವೋ’ಎನ್ನುತ್ತಾ ಮಹಿಳಾ ಸಮಸ್ಯೆಗಳ ಬಗ್ಗೆ ಸಾಕಷ್ಟುಮಾತನಾಡುತ್ತಿದ್ದರು. ಸ್ಮೃತಿ ಇರಾನಿ (SMRUTHI IRANI) ಅವರು ಸಚಿವರಾಗುವ ಮೊದಲು ಹಣದುಬ್ಬರ, ಮಹಿಳೆಯರ ಸುರಕ್ಷತೆ ಮತ್ತು ನಿರುದ್ಯೋಗದಂತಹ ವಿಷಯಗಳ ಬಗ್ಗೆ ಮಾತನಾಡುತ್ತಿದ್ದರು, ಮೋದಿ (MODI) ಸರ್ಕಾರದ ಮತ್ತೊಬ್ಬ ಮಹಿಳಾ ಸಚಿವೆ ಮೀನಾಕ್ಷಿ ಲೇಖಿ ಮೌನವಾಗಿರುವುದನ್ನು ನೋಡಿದರೆ ಅತ್ಯಾಚಾರಿಗಳ ಬೆಂಬಲಕ್ಕೆ ಇಡೀ ಕೇಂದ್ರ ಸರ್ಕಾರವೇ ನಿಂತಿದೆಯಾ ಎಂದು ಪ್ರಶ್ನಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಮತ್ತು ಕುಸ್ತಿಪಟುಗಳಾದ ಹುಸೇನ್ ಪೈಲ್ವಾನ್, ಗಣೇಶ್ ಮಾತನಾಡಿ ಸರ್ಕಾರದ ಈ ದಬ್ಬಾಳಿಕೆಗೆ ಬೇಸತ್ತು ಮಹಿಳಾ ಕುಸ್ತಿಪಟುಗಳು ತಾವು ಗೆದ್ದಿರುವ ಪದಕಗಳನ್ನು ಗಂಗಾನದಿಗೆ ಎಸೆಯಲು
ಮುಂದಾಗಿದ್ದಾರೆ. ಇದಕ್ಕಿಂತ ದೊಡ್ಡ ಅಪಮಾನ ಬೇರೆ ಇಲ್ಲ. ಈ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಈ ವಿಚಾರದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು
ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ಕ್ರೀಡಾಪಟುಗಳಾದ ಎಲ್.ಎಂ.ಪ್ರಕಾಶ್, ಗೋಪಾಲಕೃಷ್ಣ, ಗೋಪಿ ಅಂತು, ಕ್ರಿಕೆಟ್ ತಿಮ್ಮೇಶ್, ಕುಮಾರ್, ಶ್ರೀಕಾಂತ್ ಬಗೇರ, ರಾಜು ಭಂಡಾರಿ, ಅಕ್ರಂಬಾಷಾ, ಅಲಿ ರೆಹಮತ್, ರತನ್, ಲೋಕಿಕೆರೆ ಪ್ರದೀಪ್, ಅರುಣ್, ಚೈತನ್ಯ ಕುಮಾರ್, ಲಾಲ್ ಆರೀಫ್, ಹರೀಶ್, ಮೊಟ್ಟೆ ದಾದಾಪೀರ್, ಬಸವರಾಜ ಆವರಗೆರೆ, ಮಧು ಪವಾರ್, ಹನುಮಂತಪ್ಪ, ಸುರೇಶ್ ಜಾಧವ್, ಸೈಯದ್ ಜಿಕ್ರಿಯಾ, ಆರೋಗ್ಯಸ್ವಾಮಿ, ಪ್ರವೀಣ್ ಸೇರಿದಂತೆ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment