ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಫಸಲಿಗೆ ಬರುತ್ತಿದ್ದ ಮೂರೂವರೆ ಎಕರೆ ಅಡಿಕೆ ಮರಗಳ ಕಡಿದು ಹಾಕಿದ ದುಷ್ಕರ್ಮಿಗಳು: ರೈತರ ಗೋಳಾಟ

On: October 29, 2023 4:14 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:29-10-2023

ದಾವಣಗೆರೆ: ಹರಿಹರ ತಾಲೂಕಿನ ಉಕ್ಕಡಗಾತ್ರಿ ಸಮೀಪದ ಕಡರನಾಯ್ಯನಹಳ್ಳಿ ಗ್ರಾಮದಲ್ಲಿ 120ಕ್ಕಿಂತ ಹೆಚ್ಚು ಅಡಿಕೆ ಮರಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ ಘಟನೆ ನಡೆದಿದೆ.

ಗ್ರಾಮದಲ್ಲಿ ಮೂರುವರೆ ಎಕರೆಯಲ್ಲಿ ನಾಗಲಿಂಗಪ್ಪ ಪೂಜಾರ್ ಮತ್ತು ವಸಂತಪ್ಪ ಪೂಜಾರ್ ಅವರಿಗೆ ಸೇರಿದ ಅಡಿಕೆ ತೋಟ ಇದಾಗಿತ್ತು. ಇನ್ನು ಸ್ವಲ್ಪ ದಿನಗಳಲ್ಲಿ ಅಡಿಕೆ ಫಲವೂ ಬರುತಿತ್ತು. ಆದ್ರೆ, ದುಷ್ಕರ್ಮಿಗಳು ರಾತ್ರೋರಾತ್ರಿ ಅಡಿಕೆ ಮರಗಳನ್ನು ಕಡಿದು ಹಾಕಿ ಹೋಗಿದ್ದಾರೆ.

ಕಳೆದ ಆರೇಳು ವರ್ಷಗಳಿಂದಲೂ ಅಡಿಕೆ ಮರಗಳನ್ನು ಬೆಳೆಸುತ್ತಿದ್ದರು. ಮಕ್ಕಳಂತೆ ಪೋಷಿಸಿ ಕಷ್ಟಪಟ್ಟು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಡಿಕೆ ಮರಗಳನ್ನು ಬೆಳೆಸಿದ್ದ ರೈತರ ಗೋಳಾಟ ಹೇಳತೀರದ್ದಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತೆ ರೈತರು ಬೆಳೆದಿದ್ದ ಅಡಿಕೆ ಗಿಡಗಳನ್ನು ಕಡಿದು ಹಾಕಿರುವ ರೀತಿ ನೋಡಿ ಕಣ್ಣೀರು ಸುರಿಸುವಂತಾಗಿದೆ.

ಈ ಬಾರಿ ಬರಗಾಲ ಬಂದಿದ್ದು, ರೈತರು ಮೊದಲೇ ಸಂಕಷ್ಟದಲ್ಲಿದ್ದಾರೆ. ಇಂಥ ವೇಳೆಯಲ್ಲಿ ಅಡಿಕೆ ಮರಗಳನ್ನು ಕಡಿದು ಹಾಕಿರುವ ದುಷ್ಕರ್ಮಿಗಳನ್ನು ಸುಮ್ಮನೆ ಬಿಡಬಾರದು. ಆದಷ್ಟು ಬೇಗ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಲೇಬೇಕು ಎಂದು ಕರಿಬಸವೇಶ್ವರ ದೇವಸ್ಥಾನದ ಟ್ರಸ್ಟ್ ನ ಕಾರ್ಯದರ್ಶಿ ಎಸ್. ಸುರೇಶ್ ಅವರು ಒತ್ತಾಯಿಸಿದ್ದಾರೆ. ಮಲೇಬೆನ್ನೂರು ಸಬ್ ಇನ್ ಸ್ಪೆಕ್ಟರ್ ಪ್ರಭು ಡಿ. ಕೆಳಗಿನಮನಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment