SUDDIKSHANA KANNADA NEWS/ DAVANAGERE/ DATE:13-02-2025
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟ ತಲುಪಿತ್ತು. ಅಲ್ಲಿ ವರಿಷ್ಠರು ವಿಜಯೇಂದ್ರ ಅವರ ಪರ ನಿಲ್ಲುವ ಮೂಲಕ ನಿಟ್ಟುಸಿರುಬಿಟ್ಟಿದ್ದರು. ಇದಾದ ಬಳಿಕ ವಿಜಯೇಂದ್ರ ಅವರು ಕುಂಭಮೇಳಕ್ಕೆ ಭೇಟಿ ನೀಡಿದ್ದು ಕುತೂಹಲ ಕೆರಳಿಸಿದೆ.
ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದು ಪುನೀತ ಭಾವ ಮೂಡಿಸಿತು ಎಂದು ವಿಜಯೇಂದ್ರ ಬಣ್ಣಿಸಿದರು.
ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಈ ಕುಂಭಮೇಳ ಫೆಬ್ರವರಿ 28ರ ಕೊನೆಯ ದಿನದವರೆಗೂ ಹರಿದು ಬರುವ
ಭಕ್ತ ಸಾಗರಕ್ಕೆ ಪುಣ್ಯ ಲಭಿಸಲಿ, ಯಾವುದೇ ಅವಘಡಗಳು ಸಂಭವಿಸದಿರಲೆಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು. ಪರಮಪೂಜ್ಯ ಋಷಿ ಮುನಿಗಳ ಆಶೀರ್ವಾದ ನವ ಚೈತನ್ಯ ಮೂಡಿಸಿತು ಎಂದು ವಿಜಯೇಂದ್ರ ಹೇಳಿದರು.