ದಾವಣಗೆರೆ:“ರಾಜಕೀಯದಲ್ಲಿ ಎಲ್ಲರಿಗೂ ತಮ್ಮ ಬೇಡಿಕೆ ಕೇಳುವ ಅಧಿಕಾರವಿದೆ. ಅವರು ಕೇಳುವುದರಲ್ಲಿ ತಪ್ಪಿಲ್ಲ. ಪಕ್ಷಕ್ಕೆ ದುಡಿದಿರುತ್ತಾರೆ, ಅವರಿಗೆ ಕೇಳುವ ಹಕ್ಕಿರುತ್ತದೆ. ಇರುವುದು ಒಂದು ಸೀಟು. ನಾವು ಮೊದಲಿನಿಂದಲೂ ಎಲ್ಲರಿಗೂ ಅಧಿಕಾರ ನೀಡುತ್ತಾ ಬಂದಿದ್ದು, ಎಲ್ಲಾ ವಿಚಾರವನ್ನು ಬಗೆಹರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಗೊಂದಲ ಹಾಗೂ ಬಂಡಾಯವನ್ನು ಯಾವ ರೀತಿ ಬಗೆಹರಿಸುತ್ತೀರಿ ಎಂದು ಕೇಳಿದಾಗ ಈ ಉತ್ತರ ನೀಡಿದರು.
ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಒಬ್ಬರು ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಶಾಮನೂರು ಶಿವಶಂಕರಪ್ಪ ಅವರ ಆತ್ಮೀಯರು. ಅವರು ಹಾಗೂ ಇತರರ ಜತೆ ನಾವು ಚರ್ಚೆ ಮಾಡುತ್ತಿದ್ದು, ಎಲ್ಲವನ್ನು ಸರಿ ಮಾಡುತ್ತೇವೆ” ಎಂದು ತಿಳಿಸಿದರು.
ಯಾವ ವಿಚಾರದ ಮೇಲೆ ಚುನಾವಣೆ ಮಾಡುತ್ತೀರಿ ಎಂದು ಕೇಳಿದಾಗ, “ನಾವು ಮಾಡುತ್ತಿರುವ ಅಭಿವೃದ್ಧಿ ಕೆಲಸದ ಮೇಲೆ, ಸಾಮಾಜಿಕ ಚಿಂತನೆ, ಎಲ್ಲಾ ಸಮಾಜಕ್ಕೂ ನೀಡುತ್ತಿರುವ ನ್ಯಾಯದ ಮೇಲೆ ಚುನಾವಣೆ ಮಾಡುತ್ತೇವೆ. ಇದೇ ನಮ್ಮ ಪಕ್ಷದ ಮೂಲ ಸಿದ್ಧಾಂತ” ಎಂದು ತಿಳಿಸಿದರು.
- Congress Rebel Candidate
- Davanagere Politics
- Davanagere South By-Election 2026
- DK Shivakumar
- Karnataka Political News
- KPCC
- Mohammad Sadiq Pehelwan
- Samarth Mallikarjun
- Shamanur Shivashankarappa
- Withdrawal of Nomination.
- ಕರ್ನಾಟಕ ರಾಜಕೀಯ ಸುದ್ದಿ
- ಕಾಂಗ್ರೆಸ್ ಬಂಡಾಯ ಅಭ್ಯರ್ಥಿ
- ಕೆಪಿಸಿಸಿ
- ಡಿ. ಕೆ. ಶಿವಕುಮಾರ್
- ದಾವಣಗೆರೆ ದಕ್ಷಿಣ ಉಪಚುನಾವಣೆ
- ದಾವಣಗೆರೆ ರಾಜಕೀಯ
- ಮೊಹಮ್ಮದ್ ಸಾದಿಕ್ ಪೈಲ್ವಾನ್
- ಶಾಮನೂರು ಶಿವಶಂಕರಪ್ಪ
- ಸಮರ್ಥ್ ಮಲ್ಲಿಕಾರ್ಜುನ್





Leave a comment