ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸುಪ್ರೀಂಕೋರ್ಟಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಪರ ವಾದ ಮಾಡುವವರು ಯಾರು ಗೊತ್ತಾ…?

On: February 17, 2025 12:24 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:17-02-2025

ಬೆಂಗಳೂರು: ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ತೂಗುದೀಪ ಬರ್ತ್ ಡೇ ಆಚರಿಸಿಕೊಂಡಿದ್ದಾರೆ. ಆದ್ರೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಮುಕ್ತಿ ಸಿಕ್ಕಿಲ್ಲ. ದರ್ಶನ್ ತೂಗುದೀಪ ಅವರಿಗೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಸಂಕಷ್ಟಕ್ಕೆ ಇನ್ನೂ ಬ್ರೇಕ್ ಬಿದ್ದಿಲ್ಲ.

ದರ್ಶನ್ ತೂಗುದೀಪ ಅವರು ಸುಪ್ರೀಂಕೋರ್ಟ್ ನಲ್ಲಿ ಜಾಮೀನು ಪಡೆಯಲು ತಂತ್ರಗಾರಿಕೆ ರೂಪಿಸಿದ್ದಾರೆ. ಜೊತೆಗೆ ಹಿರಿಯ ವಕೀಲರ ಮೊರೆ ಹೋಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಹಿರಿಯ ವಕೀಲ ಕಪಿಲ್ ಸಿಬಲ್ ದರ್ಶನ್ ಪರ ವಾದ ಮಾಡುತ್ತಾರೆ ಎಂದು ತಿಳಿದು ಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಕೊಟ್ಟಿತ್ತು. ಬಳಿಕ ಜಾಮೀನು ವಜಾಗೊಳಿಸಲು ಸುಪ್ರೀಕೋರ್ಟ್ ಮೆಟ್ಟಿಲೇರಿ ಪೊಲೀಸ್ ಇಲಾಖೆಯು ಸಕಲ ಪ್ರಯತ್ನ ಮುಂದುವರಿಸಿದೆ. ಇದು ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡರಿಗೆ ಆತಂಕ ತರುವಂತೆ ಮಾಡಿದೆ. ಹಾಗಾಗಿ, ದರ್ಶನ್ ಕುಟುಂಬ ಕಪಿಲ್ ಸಿಬಲ್ ರನ್ನು ಸಂಪರ್ಕ ಮಾಡಿದೆ. ಜೊತೆಗೆ ಪ್ರಕರಣ ಸಂಬಂಧ ಭೇಟಿಯಾಗಿ ಚರ್ಚೆ ಮಾಡಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸುಪ್ರೀಂನಲ್ಲಿ ಮಾರ್ಚ್ 18ಕ್ಕೆ ದರ್ಶನ್ ಅರ್ಜಿ ವಿಚಾರಣೆಗೆ ಬರಲಿದೆ. ಅಂದು ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆ ಹೆಚ್ಚಿದೆ ಎಂದು ದರ್ಶನ್ ಕುಟುಂಬದ ಮೂಲಗಳು ತಿಳಿಸಿವೆ. ಹೈಕೋರ್ಟ್ ನಲ್ಲಿ ರಿಲೀಫ್ ಪಡೆದಂತೆ ಸುಪ್ರೀಂನಲ್ಲಿಯೂ
ಪಡೆಯಲು ದರ್ಶನ್ ಮತ್ತವರ ಕುಟುಂಬವು ಪ್ರಯತ್ನ ಮುಂದುವರಿಸಿದೆ.

ಸುಪ್ರೀಂನಲ್ಲಿ ಜಾಮೀನು ವಜಾಕ್ಕಾಗಿ ಅರ್ಜಿ ಸಲ್ಲಿಸಿರೋ ಪೊಲೀಸರು ಆರೋಪಿಗಳ ಜಾಮೀನು ತೆಗೆಯಲು ಪ್ರಯತ್ನಿಸಿ ದರ್ಶನ್ , ಪವಿತ್ರ ಸೇರಿದಂತೆ ಏಳು ಮಂದಿಯ ಜಾಮೀನು ವಜಾಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ದರ್ಶನ್ ನಿಂದ ಸುಪ್ರೀಂ ನಲ್ಲಿ ವಾದಿಸಲು ಹಿರಿಯ ನುರಿತ ವಕೀಲರ ನೇಮಕ ಮಾಡಲು ತಯಾರಿ ನಡೆದಿದೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment