SUDDIKSHANA KANNADA NEWS/ DAVANAGERE/ DATE:01-01-2025
ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷರ ಕಳೆದ ವರ್ಷದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮರು ಪೋಸ್ಟ್ ಮಾಡಿದ್ದಾರೆ. ಇದನ್ನು ಯಾರೂ ನಂಬಬೇಡಿ ಎಂದು ಬಿಜೆಪಿ ರಾಜ್ಯ ಘಟಕ ಮನವಿ ಮಾಡಿದೆ.
ಈ ವರ್ಷ ಬಿಜೆಪಿ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದುಕೊಂಡು ಹೋಗುವ ಕಾರ್ಯಕ್ರಮ ಸದ್ಯಕ್ಕೆ ಇಲ್ಲ. ಕಳೆದ ವರ್ಷ ಜನವರಿ- ಫೆಬ್ರವರಿಯಲ್ಲಿ 25 ರೈಲುಗಳಲ್ಲಿ 26 ಸಾವಿರ ರಾಮಭಕ್ತರನ್ನು ಅಯೋಧ್ಯೆ ದರ್ಶನಕ್ಕೆ ಕಳುಹಿಸಿಲಾಗಿತ್ತು ಎಂದು ಅಯೋಧ್ಯೆ ಶ್ರೀ ರಾಮಮಂದಿರ ದರ್ಶನ ಅಭಿಯಾನ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಸ್ಪಷ್ಟನೆ ನೀಡಿದ್ದಾರೆ.