ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಪ್ಲಾಸ್ಟಿಕ್ ನಂಥ ವಿಷದ ವಸ್ತು ಬೆಂಕಿಯಲ್ಲಿ ಸುಡಬೇಡಿ, ಹಣ ಕೊಟ್ಟು ಆಕ್ಸಿಜನ್ ಪಡೆಯೋ ಪರಿಸ್ಥಿತಿ ತಂದುಕೊಳ್ಳಬೇಡಿ..!

On: March 1, 2024 10:07 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ದಾವಣಗೆರೆ: ಪರಿಸರ ಅಂದಾಕ್ಷಣ ನೆನಪಾಗುವುದು ಬರೀ ಗುಡ್ಡ- ಬೆಟ್ಟ, ಅಲ್ಲಿರುವ ಗಿಡ- ಮರಗಳು ಅಷ್ಟೇ ಅಲ್ಲ ನಮ್ಮ ಸುತ್ತಲೂ ಇರುವ ವಿವಿಧ ಕ್ಷೇತ್ರಗಳ ವಾತಾವರಣವು ಚೆನ್ನಾಗಿರಬೇಕು ಎಂದು ಯುವ ವಿಜ್ಞಾನಿ, ದಾವಣಗೆರೆ ವಿಶ್ವವಿದ್ಯಾಲಯದ ಪರಿಸರ ಮತ್ತು ವಿಜ್ಞಾನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವೀರೇಶ್ ಎಸ್. ಜೆ. ಅವರು ನುಡಿದರು.

ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಹಾಲಕೆರೆ ಶ್ರೀ ಅನ್ನದಾನೇಶ್ವರ ಮಠದಲ್ಲಿ ಏರ್ಪಡಿಸಿದ್ದ 266ನೇ ಶಿವಾನುಭವ ಸಂಪದದಲ್ಲಿ ಉಪನ್ಯಾಸ ನೀಡಿದ ಅವರು, ಶಿಕ್ಷಣ ಕ್ಷೇತ್ರ, ಮಠದ ಪರಿಸರ ಮನುಷ್ಯನನ್ನು ಮತ್ತಷ್ಟು ಎತ್ತರಕ್ಕೆ ಬೆಳೆಸುತ್ತದೆ ಎಂದರು.

ಪೊಲೀಸ್ ಠಾಣೆ, ಕೋರ್ಟ್ ಆಸ್ಪತ್ರೆಗಳೂ ಸಹ ಪರಿಸರದ ವ್ಯಾಪ್ತಿಯಲ್ಲಿ ಬರುತ್ತವೆ. ಬರೀ ಪಾಠ ಓದಿದರೆ ಸಾಲದು, ಅದರ ತಿರುಳು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಕೃತಿಯಲ್ಲಿ ಜಾರಿಗೆ ತಂದಾಗ ಮಾತ್ರ ಮನುಷ್ಯರ ಜೀವನ ಸಾರ್ಥಕವಾಗುತ್ತದೆ. ಪರಿಸರಕ್ಕೂ ಬಸವಣ್ಣನವರ ವಚನಗಳಿಗೂ ಸಾಮ್ಯತೆ ಇದೆ ಎಂದು ನುಡಿದು ಪ್ರಕೃತಿಯ ಸೂಕ್ಷ್ಮಾಣು ಜೀವಿಗಳ ಬಗ್ಗೆ ಸದಾ ಜಾಗೃತರಾಗಿರಬೇಕು ಎಂದರು.

ಹಣದಿಂದ ವಸ್ತುಗಳನ್ನು ಖರೀದಿಸಬಹುದು. ಆದರೆ ಪರಿಸರದಲ್ಲಿ ಗಿಡಮರಗಳು ಕೊಡುವ ಆಕ್ಸಿಜನ್ ನಿಂದ ಸಮಾಜ ಆರೋಗ್ಯವಾಗಿರುತ್ತದೆ, ಪ್ಲಾಸ್ಟಿಕ್ ನಂತಹ ವಿಷದ ವಸ್ತುಗಳನ್ನು ಬೆಂಕಿಯಲ್ಲಿ ಸುಡಬೇಡಿ. ಅದರಿಂದ
ಕ್ಯಾನ್ಸರ್ ರೋಗ ಉಲ್ಬಣವಾಗುತ್ತದೆ, ಆಗ ಆಸ್ಪತ್ರೆಗೆ ಹೋಗಿ ಆಕ್ಸಿಜನ್ ಖರೀದಿಸುತ್ತೇವೆ. ಇದರ ಅವಶ್ಯಕತೆ ಇದೆಯೇ ಎಂದು ಪ್ರಶ್ನಿಸಿ ನಮ್ಮ ಆರೋಗ್ಯ ನಮ್ಮ ಕೈಯಲ್ಲಿರಬೇಕು ಎಂದು ತಿಳಿಸಿದರು.

ಸುಸ್ಥಿರ ಪರಿಸರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು. ಸೂರ್ಯನ ಕಿರಣಗಳು ಕೇವಲ 2 ರಷ್ಟು ಮಾತ್ರ ಭೂಮಿಗೆ ಬರುತ್ತದೆ. ಇದು ಹೆಚ್ಚಾದರೆ, ಸಾವು- ನೋವುಗಳು ಹೆಚ್ಚಾಗುತ್ತವೆ. ಸೂರ್ಯನು ಸುತ್ತಲೂ ಇರುವ
ಓಝೋನ್ ಪದರ ಕೆಲಸ ಮಾಡದಿದ್ದರೆ,ಲೋಕ ಅಲ್ಲೋಲ ಕಲ್ಲೋಲವಾಗುತ್ತದೆ, ಆದ್ದರಿಂದ ಮನುಷ್ಯರಾದ ನಾವು ವಾಯುಮಾಲಿನ್ಯವನ್ನು ತಡೆಯಬೇಕು. ಹೆಚ್ಚು ಗಿಡಗಳನ್ನು ನೆಡುವುದರ ಮೂಲಕ ಪರಿಸರದ ಬಗ್ಗೆ
ಸದಾ ಜಾಗೃತರಾಗಿರಬೇಕೆಂದು ಕರೆ ನೀಡಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ಶ್ರೀ ಮ.ನಿ.ಪ್ರ. ಮುಪ್ಪಿನ ಬಸವಲಿಂಗ ಮಹಾ ಸ್ವಾಮಿಗಳವರು ಆಶೀರ್ವಚನ ನೀಡಿ ಅನುರೇಣು ತೃಣಕಾಷ್ಟ, ಎಂಬಂತೆ ಎಲ್ಲದರಲ್ಲಿಯೂ ಶಿವನ ಅನುಭವ ಹೊಂದಬೇಕು. ಪರಿಸರ ಮತ್ತು ವಿಜ್ಞಾನದ ತಿಳುವಳಿಕೆ ಅರಿತಿರಬೇಕು. ಒತ್ತಡದ ಜೀವನ ಶೈಲಿಯಲ್ಲಿಯೂ ಮನುಷ್ಯ ಪರಿಸರಕ್ಕೆ ಹೆಚ್ಚು ಕಾಳಜಿ ತೋರಿಸಬೇಕೆಂದರು.

ಲಿಂ. ಶ್ರೀಮತಿ ಗೌರಮ್ಮ ಲಿಂ.ಕೆ. ತಿಪ್ಪಣ್ಣನವರ ಸ್ಮರಣಾರ್ಥ ಅವರ ಪುತ್ರ ಕೆ.ಟಿ. ಮಹಾಲಿಂಗಪ್ಪ ಶ್ರೀಮತಿ ಶೈಲ ಇವರು ಭಕ್ತಿ ಸೇವೆ ವಹಿಸಿಕೊಂಡಿದ್ದರು. ಆರಂಭದಲ್ಲಿ ಟಿ .ಹೆಚ್. ಎಂ. ಶಿವಕುಮಾರ ಸ್ವಾಮಿ ಪ್ರಾರ್ಥಿಸಿದರು. ಹಿರಿಯ ಪತ್ರಕರ್ತ ವೀರಪ್ಪ .ಎಂ. ಭಾವಿ ಸ್ವಾಗತಿಸಿದರು. ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಸಹಶಿಕ್ಷಕಿ ತನುಜಾ ವಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಸುಜಾತ ವಂದಿಸಿದರು. ವೇದಿಕೆಯಲ್ಲಿ ಶ್ರೀ ವಿಶ್ವೇಶ್ವರ ದೇವರು, ಕಾರ್ಯದರ್ಶಿ ಎನ್. ಅಡಿವೆಪ್ಪ ಮತ್ತಿತರರು ಉಪಸ್ಥಿತರಿದ್ದರು.

 

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment