SUDDIKSHANA KANNADA NEWS/ DAVANAGERE/ DATE:18-01-2025
ದಾವಣಗೆರೆ: ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿ ಡಾ. ಬಿ. ಆರ್. ರವಿಕಾಂತೇಗೌಡ ಅವರು ಅಧಿಕಾರ ಸ್ವೀಕರಿಸಿದರು.
ಪೂರ್ವವಲಯ ವ್ಯಾಪ್ತಿ ಜಿಲ್ಲೆಗಳಾದ ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಲಾಗುವುದು ಎಂದು ರವಿಕಾಂತೇಗೌಡ ಹೇಳಿದರು.
ಈ ವೇಳೆ ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ , ಜಿ. ಮಂಜುನಾಥ, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಿ. ಎಸ್. ಬಸವರಾಜ್, ದಾವಣಗೆರೆ ನಗರ ಪೊಲೀಸ್ ಉಪಾಧೀಕ್ಷಕ ಶರಣ ಬಸವೇಶ್ವರ ಭೀಮರಾವ್, ಡಿಎಆರ್ ಉಪಾಧೀಕ್ಷಕ ಪಿ. ಬಿ. ಪ್ರಕಾಶ್, ಐಜಿಪಿ ಕಛೇರಿಯ ಪೊಲೀಸ್ ಉಪಾಧೀಕ್ಷಕ ರುದ್ರೇಶ್ ಉಜ್ಜಿನಕೊಪ್ಪ, ಬೆರಳು ಮುದ್ರೆ ಘಟಕದ ಪೊಲೀಸ್ ಉಪಾಧೀಕ್ಷಕ ರುದ್ರೇಶ್, ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್, ನಲವಾಗಲು ಮಂಜುನಾಥ, ತೇಜಾವತಿ, ಸೋಮಶೇಖರ್ ಮತ್ತಿತರರು ಹಾಜರಿದ್ದರು.