ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಯಲ್ಲೇ ಓರಿಯೆಂಟಲ್ ಇನ್ಶುರೆನ್ಸ್ ಕಂಪನಿ ಮರುಸ್ಥಾಪಿಸಿ: ನಿರ್ಮಲಾ ಸೀತರಾಮನ್ ಗೆ ಡಾ. ಪ್ರಭಾ ಒತ್ತಾಯ

On: March 20, 2025 5:49 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:20-03-2025

ದಾವಣಗೆರೆ: ಓರಿಯೆಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ವಿಭಾಗೀಯ ಕಚೇರಿಯನ್ನು ದಾವಣಗೆರೆಯಲ್ಲಿಯೇ ಮರುಸ್ಥಾಪನೆ ಮಾಡಿ ಮುಂದುವರಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ನಿಯೋಗದೊಂದಿಗೆ ಖುದ್ದಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಓರಿಯೆಂಟಲ್ ಇನ್ಶುರೆನ್ಸ್ ಕಂಪನಿಯನ್ನು ದಾವಣಗೆರೆಯಲ್ಲಿ ರದ್ದುಗೊಳಿಸಿ ಮತ್ತು ಅದನ್ನು ಚಿತ್ರದುರ್ಗ ಶಾಖೆಯ ಕಚೇರಿಯೊಂದಿಗೆ ವಿಲೀನಗೊಳಿಸುವ ಬಗ್ಗೆ ದಾವಣಗೆರೆಯ ಏಜೆಂಟರುಗಳು ಸಂಸದರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸಂಸದರು‌ ಕೇಂದ್ರ ಸಚಿವೆ ನಿರ್ಮಲಾ ಸೀತರಾಮ್ ಅವರನ್ನು ನಿಯೋಗದೊಂದಿಗೆ ಭೇಟಿ ಮಾಡಿ ಅಂಕಿಅಂಶಗಳ ಸಮೇತ ದಾವಣಗೆರೆಯಲ್ಲಿ ಮುಂದುವರೆಸುವಂತೆ ಮನವಿ ಮಾಡಿದರು.

ದಾವಣಗೆರೆ ವಿಭಾಗೀಯ ಕಚೇರಿಗೆ ಹೋಲಿಸಿದರೆ ಚಿತ್ರದುರ್ಗ ಶಾಖಾ ಕಚೇರಿಯಲ್ಲಿ ಏಜೆಂಟ್‌ಗಳ ಸಂಖ್ಯೆ ತೀರಾ ಕಡಿಮೆಯಿದೆ ಹಾಗೂ ‌2022-23ನೇ ಸಾಲಿನಲ್ಲಿ ಚಿತ್ರದುರ್ಗ ಶಾಖೆಯ ಕಛೇರಿಯು ₹ 2.92 ಕೋಟಿ ವ್ಯವಹಾರವನ್ನು
ಹೊಂದಿದ್ದು ₹ 4.55 ಕೋಟಿಯ ಕ್ಲೈಮ್‌ನೊಂದಿಗೆ ₹ 1.93 ಕೋಟಿ ನಿವ್ವಳ ನಷ್ಟವಾಗಿದೆ. ದಾವಣಗೆರೆ ವಿಭಾಗೀಯ ಕಚೇರಿಯು ₹ 3.30 ಕೋಟಿ ವ್ಯವಹಾರವನ್ನು ಹೊಂದಿದ್ದು, 2.92 ಕೋಟಿ ಕ್ಲೈಮ್‌ನೊಂದಿಗೆ ಅಲ್ಪ ಲಾಭದಲ್ಲಿದೆ
ಎಂದು ತಿಳಿಸಿಕೊಡುವ ಕೆಲಸ ಮಾಡಿದರು.

ಈ ನಿಟ್ಟಿನಲ್ಲಿ ದಿನಾಂಕ 06-07-2024 ರಂದು ಓಐಸಿ ಪ್ರಾದೇಶಿಕ ಕಚೇರಿಯಿಂದ ಹೊರಡಿಸಲಾದ ಆದೇಶವನ್ನು ರದ್ದುಪಡಿಸಲು ಮತ್ತು ದಾವಣಗೆರೆ ವಿಭಾಗೀಯ ಕಚೇರಿಯನ್ನು ದಾವಣಗೆರೆಯಲ್ಲಿಯೇ ಮರುಸ್ಥಾಪಿಸುವಂತೆ ಮನವಿ ಮಾಡಿದರು.

ಪಕ್ಕದ ಎರಡು ಜಿಲ್ಲಾ ಕಛೇರಿಗಳ ವಿಲೀನಕ್ಕೆ ಅತೀ ಅವಶ್ಯವಿದ್ದಲ್ಲಿ ಚಿತ್ರದುರ್ಗ ಶಾಖಾ ಕಛೇರಿಯನ್ನು ದಾವಣಗೆರೆ ವಿಭಾಗೀಯ ಕಛೇರಿಯೊಂದಿಗೆ ವಿಲೀನಗೊಳಿಸಿ ದಾವಣಗೆರೆಯಲ್ಲಿ ಮಾತ್ರ ಒಂದೇ ಕಛೇರಿಯನ್ನು ಸ್ಥಾಪಿಸಲು ಸೂಚನೆಗಳನ್ನು ನೀಡುವಂತೆ ಕೇಳಿಕೊಂಡರು. ಸಮಸ್ಯೆಗೆ ಆದ್ಯತೆ ನೀಡಲು ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಗತ್ಯವಿರುವ ಹೆಚ್ಚಿನ ಸೂಚನೆಗಳನ್ನು ನೀಡುವಂತೆ ಮನವಿ ಮಾಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment