ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಇ-ಪೌತಿ ಆಂದೋಲನ: ಉಚಿತವಾಗಿ ಪಹಣಿ ಪತ್ರ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು?

On: July 31, 2025 4:33 PM
Follow Us:
ಆಂದೋಲನ
---Advertisement---

SUDDIKSHANA KANNADA NEWS/ DAVANAGERE/ DATE:31_07_2025

ಶಿವಮೊಗ್ಗ: ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ.

ಬೇಕಾದ ದಾಖಲೆಗಳು:
  • ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ ನೀಡಬೇಕು
  • ವಂಶವೃಕ್ಷ
  • ವಾರಸುದಾರರ ಆಧಾರ್ ಕಾರ್ಡ್

ಈ ದಾಖಲೆಗಳು ಸೇರಿದಂತೆ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪ್ರಿಯಾಂಕ್ ಖರ್ಗೆ

ನಿಮ್ಮ ತಂದೆ, ನೀವು ಬೆಂಬಲಿಸುವ ನಕಲಿ ಗಾಂಧಿ ಕುಟುಂಬದಿಂದ ಆರ್ ಎಸ್ ಎಸ್ ನಿಷೇಧ ಸಾಧ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ ಸಾಲು ಸಾಲು ಪ್ರಶ್ನೆ ಕೇಳಿದ ಬಿಜೆಪಿ!

ರಾಶಿ

ಮಂಗಳವಾರದ ರಾಶಿ ಭವಿಷ್ಯ 14 ಅಕ್ಟೋಬರ್ 2025: ಈ ರಾಶಿಯವರಿಗೆ ಧನ ಲಾಭ 

ಸಿದ್ದರಾಮಯ್ಯ

ಜಸ್ಟ್ ಡಿನ್ನರ್ ಅಷ್ಟೇ, ರಾಜಕೀಯ ಚರ್ಚೆ ಇಲ್ಲ: ಸಚಿವ ಸಂಪುಟ ಪುನರ್ರಚನೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ!

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

Leave a Comment