ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘದ ಪ್ರಥಮ ಆಡಳಿತ ಮಂಡಳಿಗೆ ಚುನಾವಣಾ ವೇಳಾಪಟ್ಟಿ

On: April 3, 2025 5:50 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:03-04-2025

ದಾವಣಗೆರೆ: ಹೊಸದಾಗಿ ನೋಂದಣಿಯಾದ ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘ ನಿ. ದಾವಣಗೆರೆ ಇದರ ಪ್ರಥಮ ಆಡಳಿತ ಮಂಡಳಿಗೆ ಚುನಾವಣೆಯನ್ನು ಏಪ್ರಿಲ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 12, ಪಿ.ಬಿ.ರಸ್ತೆ ದಾವಣಗೆರೆ ಇಲ್ಲಿ ಚುನಾವಣೆ ನಡೆಸಲಾಗುವುದು.

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಹಾಗೂ ಸಂಘದ ಬೈಲಾ ಅಧ್ಯಾಯ ಸಂ:7 ಇದ್ದು, ಕ್ರ.ಸಂ-59 ರ ರೀತ್ಯಾ ಸಂಘದ ಒಟ್ಟು ಆಡಳಿತ ಮಂಡಳಿ ಸದಸ್ಯರ ಸಂಖ್ಯೆ-17 ಇದ್ದು, ಈ ಪೈಕಿ ಚುನಾವಣೆ ಮೂಲಕ ಚುನಾಯಿಸಬೇಕಾದ ನಿರ್ದೇಶಕರ ಸಂಖ್ಯೆ ಒಟ್ಟು-8 ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು.

8 ಸ್ಥಾನಗಳ ಕ್ಷೇತ್ರ ವಿಂಗಡಣೆ ಹಾಗೂ ಮೀಸಲಾತಿ ವಿವರ: ಸಾಮಾನ್ಯ-2, ಪರಿಶಿಷ್ಟ ಜಾತಿ-1, ಪರಿಶಿಷ್ಟ ಪಂಗಡ-1, ಹಿಂದುಳಿದ ವರ್ಗ ಎ-2 ಹಾಗೂ ಮಹಿಳಾ ಮೀಸಲು-2 ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು.

ಚುನಾವಣಾ ವೇಳಾಪಟ್ಟಿ: ಏ.4 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು.

ಏ.11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.12 ನಾಮಪತ್ರಗಳ ಪರಿಶೀಲನೆ ನಂತರ ಚುನಾವಣಾಧಿಕಾರಿಗಳಿಂದ ಕ್ರಮ ಬದ್ದವಾಗಿ ನಾಮನಿರ್ದೇಶನಗೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಏ.13 ರಂದು ನಾಮಪತ್ರ ವಾಪಸ್ಸು ಪಡೆಯುವ ದಿನ.

ನಂತರ ಸ್ಪರ್ಧೆಯಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಹಾಗೂ ಚುನಾವಣಾಧಿಕಾರಿಗಳಿಂದ ಅಭ್ಯರ್ಥಿಗಳಿಗೆ ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುವುದು. ಏ.14 ರಂದು ಸೂಚನಾ ಫಲಕದಲ್ಲಿ ಚಿಹ್ನೆಗಳ ಸಮೇತ ಮಾದರಿ ಮತ ಪತ್ರದ ಹಂಚಿಕೆ. ಏ.19 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಸಲಾಗುವುದು. ನಂತರ ಅದೇ ದಿನ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದೆಂದು ಕಾರ್ಮಿಕರ ಕ್ಷೇಮಾಭಿವೃದ್ದಿ ಸಹಕಾರ ಸಂಘ ನಿ, ರಿಟರ್ನಿಂಗ್ ಅಧಿಕಾರಿ ಸತೀಶ್ ನಾಯ್ಕ.ಎಲ್ ತಿಳಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಅಂತರಾಷ್ಟ್ರ

ನ. 26ರಿಂದ ಐದು ದಿನಗಳ ಶಾಮನೂರು ಡೈಮಂಡ್, ಶಿವಗಂಗಾ ಕಪ್ 2025: ಅಂತರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ

ಅಪಘಾತದಲ್ಲಿ ಮೃತಪಟ್ಟ ಶಿಕ್ಷಕನ ಕುಟುಂಬಕ್ಕೆ ಸಿಕ್ತು 1 ಕೋಟಿ ಪರಿಹಾರ! ಸಿಕ್ಕಿದ್ದು ಹೇಗೆ ಗೊತ್ತಾ?

ಭದ್ರತೆ

ಭದ್ರತೆ ಸವಾಲು ನಿಭಾಯಿಸದ, ದೇಶದ ಭದ್ರತಾ ವ್ಯವಸ್ಥೆ ವೈಫಲ್ಯ ಹೊಣೆ ಹೊತ್ತು ಅಮಿತ್ ಶಾ ರಾಜೀನಾಮೆ ನೀಡಲಿ: ಬಿ. ಕೆ. ಹರಿಪ್ರಸಾದ್ ಆಗ್ರಹ

ಧರ್ಮೇಂದ್ರ

ಧರ್ಮೇಂದ್ರ ಚಿಕಿತ್ಸೆಗೆ ಸ್ಪಂದಿಸುತ್ತಾ ಚೇತರಿಕೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಹೇಮಾ ಮಾಲಿನಿ, ಇಶಾ ಡಿಯೋಲ್ ಕೆಂಡಾಮಂಡಲ!

ಪ್ರಭಾ ಮಲ್ಲಿಕಾರ್ಜುನ್

ಅಡಿಕೆ ಕ್ಯಾನ್ಸರ್ ಕಾರಕವಲ್ಲ, ಹೆಚ್ಚಿನ ಸಂಶೋಧನೆಗೆ ಅನುದಾನ ಕೊಡುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ: ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ

ಕೆಂಪು ಕೋಟೆ ಪ್ರಬಲ ಸ್ಫೋಟ ಹಿನ್ನೆಲೆ: ದಾವಣಗೆರೆ ಜಿಲ್ಲೆಯಲ್ಲಿ ಹೇಗಿದೆ ಕಟ್ಟೆಚ್ಚರ?

Leave a Comment