ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಚುನಾವಣಾ ಅಕ್ರಮಗಳ ಕಣ್ಗಾವಲಿಗೆ 3 ಪಾಳಿಯಲ್ಲಿ 32 ಚೆಕ್ ಪೋಸ್ಟ್ ಗಳ ಸ್ಥಾಪನೆ: ಸವಾರರೊಂದಿಗೆ ಸೌಜನ್ಯವಾಗಿ ವರ್ತಿಸುವಂತೆ ಡಿಸಿ ಸೂಚನೆ

On: March 18, 2024 7:27 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-03-2024

ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ಮುಕ್ತ, ನ್ಯಾಯಸಮ್ಮತವಾಗಿ ನಡೆಸಲು ಜಿಲ್ಲೆಯ ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ತಿಳಿಸಿದ್ದಾರೆ.

ಪ್ರತಿ ಚೆಕ್ ಪೋಸ್ಟ್ ಗಳಲ್ಲಿ ಮೂವರ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ದಿನದ 24 ಗಂಟೆಯು ಕಾವಲು ನಡೆಸುವ ಮೂಲಕ ಅಕ್ರಮವಾಗಿ ಸಾಗಣೆ ಮಾಡುವ ವಸ್ತುಗಳು, ಮದ್ಯ, ನಗದು ಮತ್ತು ಇನ್ನಿತರೆ ಬಂಗಾರದ ವಸ್ತುಗಳ ಮೇಲೆ ನಿಗಾ ಇಡುವರು. ಆ ಮಾರ್ಗದಲ್ಲಿ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಸ್ತುಗಳನ್ನು ಸಾಗಣೆ ಮಾಡಲು ಅಭ್ಯಂತರ ಇರುವುದಿಲ್ಲ, ಆದರೆ ಸಂಬಂಧಿಸಿದ ವಸ್ತುಗಳು, ಹಣ, ಯಾವುದೇ ಇದ್ದಲ್ಲಿ ದಾಖಲೆಗಳು ಅತ್ಯವಶ್ಯಕವಾಗಿದೆ. ವಾಹನ ಸವಾರರು, ಸಾರ್ವಜನಿಕರು ಚೆಕ್ ಪೋಸ್ಟ್ ಗಳಲ್ಲಿ ಹಾಜರುಪಡಿಸುವ ಮೂಲಕ ಸಿಬ್ಬಂದಿಗೆ ಸಹಕರಿಸುವಂತೆ
ಸೂಚಿಸಲಾಗಿದೆ ಎಂದರು.

ಚೆಕ್ ಪೋಸ್ಟ್ ಗಳ ವಿವರ:

103-ಜಗಳೂರು ವಿಧಾನಸಭಾ ಕ್ಷೇತ್ರ: ಬಿದರಕೆರೆ ಹತ್ತಿರ, ಗಡಿಮಾಕುಂಟೆ, ಅರಸೀಕೆರೆ ಠಾಣೆ ವ್ಯಾಪ್ತಿಯ ಕುರೆಮಾಗನಹಳ್ಳಿ ಹತ್ತಿರ, ಚಳ್ಳಕೆರೆ ರಸ್ತೆ ಮುಸ್ಟೂರು ಹತ್ತಿರ, ಬಿಳಿಚೋಡು ವ್ಯಾಪ್ತಿಯ ಕನಾನಕಟ್ಟೆ ಎನ್.ಹೆಚ್.13 ಹತ್ತಿರ. 105-ಹರಿಹರ ವಿಧಾನಸಭಾ ಕ್ಷೇತ್ರ: ಹರಿಹರ ರಾಘವೇಂದ್ರ ಮಠದ ಹತ್ತಿರ, ಹಲಸಬಾಳು ಕ್ರಾಸ್, ಕುರುಬರಹಳ್ಳಿ ಹತ್ತಿರ, ನಂದಿಗುಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ: ಭೂಮಿಕ ನಗರ, ಲೋಕಿಕೆರೆ ಕ್ರಾಸ್, ಕಲ್ಪನಹಳ್ಳಿ ಸರ್ಕಲ್(ಮಾಗಾನಹಳ್ಳಿ), ಎನ್.ಹೆಚ್-4 ಶಾಮನೂರು ಕ್ರಾಸ್, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಪ್ ಹತ್ತಿರ.

107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಬಾಡ ಕ್ರಾಸ್, ಬೇತೂರು ರೋಡ್, ಕೊಂಡಜ್ಜಿ ರಸ್ತೆ, ಸಾಯಿ ಇಂಟರ್ ನ್ಯಾಷನಲ್ ಹೊಟೇಲ್ ಬಳಿ.

108-ಮಾಯಕೊಂಡ ವಿಧಾನಸಭಾ ಕ್ಷೇತ್ರ: ಹೆಬ್ಬಾಳ್ ಟೋಲ್ ಗೇಟ್, ಕಾರಿಗನೂರು ಕ್ರಾಸ್, ಹೆಚ್.ಬಸಾಪುರ.

109-ಚನ್ನಗಿರಿ ವಿಧಾನಸಭಾ ಕ್ಷೇತ್ರ: ಜೋಳದಾಳ್, ಮಾವಿನಕಟ್ಟೆ, ತಾವರೆಕೆರೆ, ಮಾದಾಪುರ, ಸಂತೇಬೆನ್ನೂರು.

110-ಹೊನ್ನಾಳಿ ವಿಧಾನಸಭಾ ಕ್ಷೇತ್ರ: ನ್ಯಾಮತಿ ಪೊಲೀಸ್ ಠಾಣೆಯ ಟಿ.ಜಿ.ಹಳ್ಳಿ ಕ್ರಾಸ್, ಸವಳಂಗ, ಹೊಳೆಹರಳಹಳ್ಳಿ ಕ್ರಾಸ್, ಹೊನ್ನಾಳಿ ಪೊಲೀಸ್ ಠಾಣೆಯ ಗೊಲ್ಲರಹಳ್ಳಿ ಕ್ರಾಸ್, ಕುಳಗಟ್ಟೆ ಕ್ರಾಸ್, ಜೀನಹಳ್ಳಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

ಚೆಕ್ ಪೋಸ್ಟ್ ಭೇಟಿ ಪರಿಶೀಲನೆ:

ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಅವರು ಹೆಬ್ಬಾಳ್, ಶಾಮನೂರು ಕ್ರಾಸ್ ಚೆಕ್ ಪೋಸ್ಟ್, ಹರಿಹರ ಸೇರಿದಂತೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಪ್ರಯುಕ್ತ ಕಣ್ಗಾವಲಿಗಾಗಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿ ಸರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯವನ್ನು ನಿರ್ವಹಿಸುವುದರೊಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಎಲ್ಲಾ ವಾಹನಗಳ ತಪಾಸಣೆ ಮಾಡುವ ಮೂಲಕ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಸೂಚನೆ ನೀಡಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment