• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Saturday, June 7, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ದಾವಣಗೆರೆ ಭಾಗದಲ್ಲಿ ಸ್ವಂತ ಖರ್ಚಿನಲ್ಲಿ ಐಎಎಸ್, ಕೆಎಎಸ್ ತರಬೇತಿ ಕೇಂದ್ರ ಸ್ಥಾಪನೆ: ಸತೀಶ್ ಜಾರಕಿಹೊಳಿ ಘೋಷಣೆ!

Editor by Editor
June 6, 2025
in ದಾವಣಗೆರೆ, ಬೆಂಗಳೂರು
0
ದಾವಣಗೆರೆ ಭಾಗದಲ್ಲಿ ಸ್ವಂತ ಖರ್ಚಿನಲ್ಲಿ ಐಎಎಸ್, ಕೆಎಎಸ್ ತರಬೇತಿ ಕೇಂದ್ರ ಸ್ಥಾಪನೆ: ಸತೀಶ್ ಜಾರಕಿಹೊಳಿ ಘೋಷಣೆ!

SUDDIKSHANA KANNADA NEWS/ DAVANAGERE/ DATE-06-06-2025

ದಾವಣಗೆರೆ: ದಾವಣಗೆರೆ ಜಿಲ್ಲೆಯ ಈ ಭಾಗದಲ್ಲಿ ಅನುಮತಿ ಕೊಟ್ಟರೆ ತಮ್ಮ ಸ್ವಂತ ಖರ್ಚಿನಲ್ಲಿ ಐಎಎಸ್, ಐಎಫ್‌ಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಸ್ಥಾಪಿಸಿ, ಯುವಕರನ್ನು ಉನ್ನತ ಸ್ಥಾನಕ್ಕೆ ತರುವಂತಹ ಅಭೂತಪೂರ್ವ ಕಾರ್ಯ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಅಣಜಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಯಾವುದೇ ಒಂದು ಶಾಲಾ, ಕಾಲೇಜು ನಿರ್ಮಾಣ ಮಾಡಿದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಿವೆ. ಆಗಾಗಿ ಅದರಂತೆ ರಾಜ್ಯಾದ್ಯಂತ ಈಗಾಗಲೇ ಶಿರಾ, ಕುಷ್ಟಗಿ ಹಾಗೂ ಘಟಪ್ರಭಾ ಸೇರಿದಂತೆ ಒಟ್ಟು ನಾಲ್ಕು ಭಾಗಗಳಲ್ಲಿ ತರಬೇತಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ಈ ಭಾಗದಲ್ಲೂ ತರಬೇತಿ ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಿದಲ್ಲಿ, ಯುವ ಜನರಲ್ಲಿ ಕೌಶಲ್ಯತೆ ಹೆಚ್ಚಿಸುವ ಜೊತೆಗೆ ಸಮಾಜದ ಮುಖ್ಯವಾಹಿನಿಗೆ ತರಲು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಈ ನಾಲ್ಕು ದಿಕ್ಕಿನಲ್ಲಿ ಕೆಲಸ ಮಾಡಬೇಕಿದೆ ಎಂದರು.

ಇಂದು ಉದ್ಘಾಟನೆಗೊಂಡ ವಾಲ್ಮೀಕಿ ಸಮುದಾಯ ಭವನ ಬಡವರಿಗೆ, ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಹಲವು ಕಾರ್ಯಕ್ರಮಗಳಿಗೆ ಭವನವನ್ನು ನಿರಂತರವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಒದಗಿಸುವ ಪಂಚಗ್ಯಾರಂಟಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯೋಜನೆಗಳಲ್ಲಿ ಶೇ.7.5ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಇಂತಹ ಯೋಜನೆಗಳನ್ನು ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ನಾಗರೀಕನೂ ಸಮಾಜದ ಮುನ್ನಲೆಗೆ ಬರಬೇಕು. ಆಗ ಮಾತ್ರ ಯೋಜನೆಗಳು ಸಫಲವಾಗಲು ಸಾಧ್ಯ. ಹಾಗೆಯೇ ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಸುಮಾರು 30 ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದ ಅವರು, ಭವನವನ್ನು ಕೇವಲ ಉದ್ಘಾಟನೆಗೆ ಸೀಮಿತಗೊಳಿಸದೇ ಹಲವು ಉತ್ತಮ ಕಾರ್ಯಗಳಿಗೆ ಸದ್ಬಳಕೆಯಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿ, ಇಂದು ಉದ್ಘಾಟನೆಗೊಂಡ ಭವನಕ್ಕೆ ಅನೇಕ ತೊಡಕುಗಳು ಎದುರಾದರು, ಅನುದಾನ ಪಡೆದು ಭವ್ಯವಾದ ವಾಲ್ಮೀಕಿ ಭವನವನ್ನು ನಿರ್ಮಿಸಲಾಗಿದೆ. ಇದು ಈ ಭಾಗದ ಜನತೆಗೆ ವರದಾನವಾಗಿದೆ. ಹಾಗೆಯೇ ಇಲ್ಲಿ ವಸತಿಗೃಹ, ಹೈಟೆಕ್ ಶೌಚಾಲಯ, ತಡೆಗೋಡೆ ನಿರ್ಮಾಣ ಸೇರಿದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 100 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳು ಬಾಕಿ ಇದ್ದು, ಸರ್ಕಾರದಿಂದ ಇನ್ನಷ್ಟು ಅನುದಾನ ಪಡೆದು ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೇ ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಅಣಜಿಯಲ್ಲಿ ಸುಮಾರು 2 ಕೋಟಿ ವೆಚ್ಚದ ವಾಲ್ಮೀಕಿ ಸಮುದಾಯದ ಭವನ, ಕಾಟೇಹಳ್ಳಿ ಗ್ರಾಮದಲ್ಲಿ ಬಾವಿಹಾಳು, ಗಂಗನಕಟ್ಟೆ, ಕೊಡಗನೂರು ರಸ್ತೆ ಕೂಡುವ ರಸ್ತೆಯ ಅಂದಾಜು ರೂ. 12 ಕೋಟಿ ವೆಚ್ಚದ ಕಾಮಗಾರಿ, ದಾವಣಗೆರೆಯಿಂದ ಲೋಕಿಕೆರೆ ಗ್ರಾಮದವರೆಗೆ ಹಾಗೂ ಲೋಕೀಕೆರೆ ಶ್ಯಾಗಲೇ, ಹೂವಿನಮಡು ಗ್ರಾಮದವೆರೆಗೆ ರೂ.೬ ಕೋಟಿ ವೆಚ್ಚದ ಕಾಮಗಾರಿ, ಮಾಯಕೊಂಡ ಕ್ಷೇತ್ರದಲ್ಲಿ ೨ ಕೋಟಿ ವೆಚ್ಚದ ವಿವಿಧ ಕಾಮಗಾರಿ ಸೇರಿದಂತೆ ಒಟ್ಟು ೩೦ ಕೋಟಿಗೂ ಅಧಿಕ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಹೆಚ್.ಆಂಜನೇಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಬಣ್ಣ, ಮುಖಂಡರಾದ ಹದಡಿ ಹಾಲಪ್ಪ ಸೇರಿದಂತೆ ಸಮಾಜದ ಮುಖಂಡರು, ಚುನಾಯಿತ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Next Post
ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳ ಕೂರಿಸಿ ಸಂಚಾರ: ದಾವಣಗೆರೆಯಲ್ಲಿ 105 ಕೇಸ್ ದಾಖಲು!

ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳ ಕೂರಿಸಿ ಸಂಚಾರ: ದಾವಣಗೆರೆಯಲ್ಲಿ 105 ಕೇಸ್ ದಾಖಲು!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರಿಗೆ ಸರ್ಕಾರ ನೌಕ್ರಿ ಸಿಗುವ ಯೋಗ ಸದ್ಯದಲ್ಲಿ ಇದೆ, ಈ ರಾಶಿಯ ಕಮಿಷನ್ ಏಜೆಂಟರಿಗೆ ಧನ ಲಾಭ
  • ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ, ಏನು ಮಾಡಬೇಕು?
  • ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ
  • ಗುಡ್ ನ್ಯೂಸ್: ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
  • ‘ಎಲೋನ್ ಹುಚ್ಚು ಹಿಡಿದ ವ್ಯಕ್ತಿ, ಮಸ್ಕ್ ಜೊತೆ ಮತ್ತೆ ಮಾತನಾಡಲು ‘ಆಸಕ್ತಿ ಇಲ್ಲ’: ಟ್ರಂಪ್ ಘೋಷಣೆ!

Recent Comments

No comments to show.

Archives

  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In