ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಮೊದ್ಲು ಪೀಠ ತ್ಯಾಗ ಮಾಡಿ – ನಾವು ಸಮಾಜ ಒಡೆಯುತ್ತಿಲ್ಲ, ನೀವೂ ಸಮಾಜ ಒಡೆಯಬೇಡಿ: ಸಿರಿಗೆರೆ ಶ್ರೀಗಳಿಗೆ ವಡ್ನಾಳ್ ರಾಜಣ್ಣ ಸಲಹೆ

On: September 2, 2024 12:51 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:01-09-2024

ದಾವಣಗೆರೆ: ಈ ಹಿಂದೆ ಸಿರಿಗೆರೆ ಪೀಠಾಧಿಪತಿಯಿಂದ ಕೆಳಗಿಳಿಯುವುದಾಗಿ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರೇ ಹೇಳಿದ್ದರು. ಆಗ ನಾವ್ಯಾರು ಕೇಳಿರಲಿಲ್ಲ. ಈಗ ಸಮಯ ಬಂದಿದೆ. ಪೀಠ ತ್ಯಾಗ ಮಾಡಿ ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಹೇಳಿದ್ದಾರೆ.

ದಾವಣಗೆರೆ ನಗರದ ಹೊರವಲಯದಲ್ಲಿರುವ ಅಪೂರ್ವ ರೆಸಾರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಠದ ಆಡಳಿತದಲ್ಲಿ ಏನೇನಾಗಿದೆ ಎಂಬ ಬಗ್ಗೆ ಈ ಹಿಂದೆ ನಾವೇನೂ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಹಸ್ತಕ್ಷೇಪ ಮಾಡಿರಲಿಲ್ಲ. ಇಷ್ಟರೊಳಗೆ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಪೀಠ ತ್ಯಾಗ ಮಾಡಬೇಕಿತ್ತು. ಆದ್ರೆ,. ಮಾಡಿರಲಿಲ್ಲ. ಏಕವ್ಯಕ್ತಿ ಡೀಡ್ ಸರಿಯಾದ ಕ್ರಮ ಅಲ್ಲ. ನೂತನ ಪೀಠಾಧಿಪತಿ ನೇಮಕ ಮಾಡಿ. ಇವರೆಡೂ ಸರಿಯಾಗಿದ್ದರೆ ಯಾರೂ ಮಾತನಾಡುತ್ತಿರಲಿಲ್ಲ ಎಂದು ಹೇಳಿದರು.

ಮಠದ ಆಗು ಹೋಗುಗಳು, ಚಟುವಟಿಕೆಗಳನ್ನು ಸರಿಯಾಗಿ ನಡೆಸುವ ಸೂಕ್ತರನ್ನು ಪೀಠಾಧಿಪತಿಯನ್ನಾಗಿ ನೇಮಿಸಿ. ಮಠದ ಆಸ್ತಿ ಗಮನ ತರುವಂಥ ಕೆಲಸ ಮಾಡಬೇಕು. ಸಮಾಜದಲ್ಲಿರುವ ಎಲ್ಲಾ ಊರುಗಳ ಜನರ ಬಳಿ ಹೋಗಿ ಎಲ್ಲವನ್ನೂ ಮಾತನಾಡಲು ಆಗದು. ನಾವೇನೂ ತುಂಬಾ ಬೇಡಿಕೆಗಳನ್ನು ಇಟ್ಟಿಲ್ಲ. ಇರುವುದು ಎರಡೇ ಬೇಡಿಕೆ ಎಂದು ತಿಳಿಸಿದರು.

ನಾವು ಸಮಾಜ ಒಡೆಯುವ ಕೆಲಸ ಮಾಡಿಲ್ಲ. ನೀವು ಸಮಾಜ ಒಡೆಯುವ ಕೆಲಸ ಮಾಡಬೇಡಿ. ನಾವು ತಾಳ್ಮೆಯಿಂದ ವಿನಂತಿ ಮಾಡಿಕೊಳ್ಳುತ್ತಿದ್ದೇವೆ. ಸಮಾಜದಲ್ಲಿ ಗೊಂದಲ ಉಂಟಾಗಬಾರದು. ಈ ಕಾರಣಕ್ಕೆ ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ವಡ್ನಾಳ್ ರಾಜಣ್ಣ ಆಗ್ರಹಿಸಿದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment