Site icon Kannada News-suddikshana

Explosive Detection Expertise: ಬೆರಗಾಗುವಂಥ ಟ್ರ್ಯಾಕ್ ರೆಕಾರ್ಡ್: ಸ್ಫೋಟಕ ಪತ್ತೆ, ವಿಧ್ವಂಸಕ ಕೃತ್ಯ ತಡೆ, ಪ್ರಧಾನಿ ಭೇಟಿ ಸ್ಥಳ ತಪಾಸಣೆ ನಿಪುಣೆ ಸೌಮ್ಯ ಈಗ ನೆನಪಷ್ಟೇ……!

SUDDIKSHANA KANNADA NEWS/ DAVANAGERE/ DATE:02-09-2023

ದಾವಣಗೆರೆ: ಆಕೆ ಹೆಸರು ಸೌಮ್ಯ. ಮಾಡಿರುವ ಸಾಧನೆ ಅಪಾರ. ಹೆಸರಿಗಷ್ಟೇ ಸೌಮ್ಯ ಆಗಿತ್ತು. ವಿಧ್ವಂಸಕ ಕೃತ್ಯ, ಸ್ಫೋಟಕ (Explosive) ದಾಸ್ತಾನು ಮಾಡುವವರ ನರನಾಡಿಯಲ್ಲೂ ಕಂಪನ ಬರುವಂತೆ ಕೆಲಸ ಮಾಡುತ್ತಿದ್ದಾಕೆ. ಪೊಲೀಸ್ ಶ್ವಾನ ದಳದಲ್ಲಿ ತನ್ನದೇ ಆದ ಛಾಪು ಮೂಡಿಸಿತ್ತು. ಸ್ಥಳೀಯ ಮಟ್ಟದ ಚುನಾವಣೆಯಿಂದ ಹಿಡಿದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮನದ ವೇಳೆಯಲ್ಲಿ ಪರಿಶೀಲನೆಯ ನಿಪುಣೆಯಾಗಿದ್ದ ಸೌಮ್ಯ ಈಗ ನೆನಪಷ್ಟೇ. ಉಳಿದಿರುವುದು ಆಕೆಯ ಟ್ರ್ಯಾಕ್ ರೆಕಾರ್ಡ್ ಮಾತ್ರ.

ಹೌದು. ಇದು ದಾವಣಗೆರೆ ಜಿಲ್ಲೆ ಪೊಲೀಸ್ ಶ್ವಾನ ದಳದಲ್ಲಿತ್ತು. ಈ ಶ್ವಾನದ ಹಲವು ವಿಶೇಷತೆಗಳನ್ನು ಹೊಂದಿದೆ. ಕೇವಲ ನಾಲ್ಕು ವರ್ಷಗಳಲ್ಲಿ ಅದ್ವಿತೀಯ ಸೇವೆ ನೀಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಯಾವುದೇ ಕಾರ್ಯಕ್ರಮಗಳಿದ್ದರೂ ಮುಂಚಿತವಾಗಿಯೇ ಸೌಮ್ಯ ಎಂಟ್ರಿ ಆಗುತಿತ್ತು. ಈಕೆ ಇದ್ದರೆ ಎಲ್ಲಾ ಕೆಲಸವೂ ಸಲೀಸು ಎಂಬಂತಿತ್ತು. ಯಾಕೆಂದರೆ ಅಷ್ಟು ಕರಾರುವಕ್ ಆದ ಕೆಲಸ ಈಕೆಯದ್ದು. ಪೊಲೀಸ್ ಇಲಾಖೆಗೆ ತನ್ನದೇ ಆದ ಸೇವೆ ಸಲ್ಲಿಸಿ ಈಗ ವಿಧಿವಶವಾಗಿದೆ.

ಈ ಸುದ್ದಿಯನ್ನೂ ಓದಿ: 

Gruhalakshmi ಎಫೆಕ್ಟ್: ಹೊಸ ಬಿಪಿಎಲ್ ಕಾರ್ಡ್ ಗಿಲ್ಲ ಪರ್ಮಿಷನ್, ತಿದ್ದುಪಡಿಗಷ್ಟೇ ಗ್ರೀನ್ ಸಿಗ್ನಲ್.. ಯಾಕೆ ಅನ್ನೋದಕ್ಕೆ ಇಲ್ಲಿದೆ ನೋಡಿ ಕಾರಣ…!

2018ರ ಜೂನ್. 8ರಂದು ಜನಿಸಿದ ಲ್ಯಾಬ್ರಡಾರ್ ಶ್ವಾನ ತಳಿಗೆ ಸೌಮ್ಯ ಎಂದು ಹೆಸರು ನಾಮಕರಣ ಮಾಡಲಾಗಿತ್ತು. ಒಂದು ವರ್ಷದ ಈ ಶ್ವಾನ 2019ರಲ್ಲಿ ಪೊಲೀಸ್ಇಲಾಖೆಗೆ ಸೇರಿತ್ತು. ಅಲ್ಲಿಂದ ಅಮೂಲ್ಯ ಸೇವೆ ನೀಡುತ್ತಿತ್ತು. ಆದ್ರೆ, ಕಳೆದ ಏಳು ದಿನಗಳಿಂದ ರೋಗಕ್ಕೆ ತುತ್ತಾಗಿತ್ತು. ನಾಲ್ಕೈದು ದಿನಗಳ ಹಿಂದೆ ಆಹಾರವನ್ನೂ ತ್ಯಜಿಸಿತ್ತು. ಹಾಗಾಗಿ, ಪ್ರಾಣ ಬಿಟ್ಟಿದೆ.

ಸ್ಫೋಟಕ (Explosive) ಪತ್ತೆ ಚತುರೆ:

ಸೌಮ್ಯ ಟ್ರ್ಯಾಕ್ ರೆಕಾರ್ಡ್ ಕೇಳಿದರೆ ಬೆರಗಾಗುವುದು ಖಚಿತ. ಸ್ಫೋಟಕ (Explosive) ಪತ್ತೆಗಳ ಕಾರ್ಯ, ವಿವಿಐಪಿ, ವಿಐಪಿ ಭದ್ರತಾ ತಪಾಸಣೆ ಸೇರಿದಂತೆ ಹಲವು ರೀತಿಯಲ್ಲಿ ಪೊಲೀಸ್ಇಲಾಖೆಗೆ ನೆರವಾಗಿತ್ತು. ತನ್ನ ಕಾರ್ಯವೈಖರಿಯಿಂದಲೇ
ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಸ್ಫೋಟಕ ಪತ್ತೆ ವಿಭಾಗದಲ್ಲಿ ಸೌಮ್ಯ ಕಾರ್ಯನಿರ್ವಹಿಸಿತ್ತು.

ಸೌಮ್ಯ ಟ್ರ್ಯಾಕ್ ರೆಕಾರ್ಡ್:

 

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಸೌಮ್ಯಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೌಮ್ಯಳ ಮೃತದೇಹಕ್ಕೆ ಹೂವಿನ ಹಾರವಿಟ್ಟು ಸೆಲ್ಯೂಟ್ ಮಾಡಿ ಗೌರವ ಸಲ್ಲಿಸಿದರು.

ಏನಾಗಿತ್ತು ಸೌಮ್ಯಳಿಗೆ…?

ತುಂಬಾ ಚಟುವಟಿಕೆ, ಕ್ರಿಯಾಶೀಲವಾಗಿದ್ದ ಸೌಮ್ಯ ಕಳೆದ ಏಳೆಂಟು ದಿನಗಳ ಹಿಂದೆ ಮಂಕಾಗಿತ್ತು. ಕಣ್ಣು ಮತ್ತು ಬಾಯಿಯಲ್ಲಿ ಬಿಳಿಯಾದ ರೀತಿಯಲ್ಲಿ ಕಂಡು ಬರುತಿತ್ತು. ಕೂಡಲೇ ಚಿಕಿತ್ಸೆ ಕೊಡಿಸಲಾಯಿತು. ಬೆಂಗಳೂರಿನಲ್ಲಿ ನಾಲ್ಕು ದಿನ ಚಿಕಿತ್ಸೆ ನೀಡಿಸಲಾಯಿತಾದರೂ ಬದುಕಲಿಲ್ಲ. ಸ್ಪಿನೋ ಮೆಗಾಲಿನ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದ ಸೌಮ್ಯ 5 ವರ್ಷ 2 ತಿಂಗಳಿಗೆ ವಯಸ್ಸಿಗೆ ಪ್ರಾಣ ಬಿಟ್ಟಿದೆ.

ಈ ಕಾಯಿಲೆ ಯಾಕಾಗಿ ಬರುತ್ತೆ…?

ಈ ಶ್ವಾನಗಳು ದೊಡ್ಡ ವಿವಿಐಪಿ, ವಿಐಪಿ, ಸ್ಫೋಟಕ (Explosive) ಪತ್ತೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬಿಡ ಪ್ರದೇಶಗಳು ಸೇರಿದಂತೆ ಹಲವೆಡೆ ಪತ್ತೆ ಕಾರ್ಯದಲ್ಲಿ ನಿರತವಾಗುತಿತ್ತು. ಗುಟ್ಕಾ ಜಗಿದು ಕೆಲವರು ಉಗುಳಿರುತ್ತಾರೆ. ಆ ಉಗುಳನ್ನು ಮೂಸುವುದಲ್ಲದೇ, ವಾಸನೆ ಮೂಗಿಗೆ ಬಡಿಯುತ್ತದೆ. ಆದ್ರೆ, ಇದು ನಿಧಾನವಾಗಿ ಶ್ವಾನದ ದೇಹದೊಳಗೆ ಹೋಗುತ್ತದೆ. ಬಲಹೀನವಾದಾಗ ಮಾತ್ರ ಈ ಕಾಯಿಲೆ ಇದೆ ಎಂಬುದು ಗೊತ್ತಾಗುತ್ತದೆ. ರಕ್ತ ಪರೀಕ್ಷೆ ಮಾಡಿಸಿದಾಗ ಈ ವಿಚಾರ ಬೆಳಕಿಗೆ ಬಂದಿದೆ ಎಂದು ಈ ಶ್ವಾನ ನೋಡಿಕೊಳ್ಳುತ್ತಿದ್ದ ಪ್ರಕಾಶ್ ಅವರು ಈ ಮಾಹಿತಿ ನೀಡಿದ್ದಾರೆ.

Police Dog Death Davanagere

ಒಟ್ಟಿನಲ್ಲಿ ಪೊಲೀಸ್ ಇಲಾಖೆಯ ಬಲಗೈ ಬಂಟನಂತಿದ್ದ, ತಪಾಸಣೆ, ಸ್ಫೋಟಕ ಪತ್ತೆಯಲ್ಲಿ ನಿಪುಣೆ, ಚಾಣಾಕ್ಷತೆಯಿಂದ ಸೌಮ್ಯ ನಿಧನ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದೂ ಹೇಳಿದ್ದಾರೆ.

Story Summery:

Davangere: Her name is Soumya. The achievement is immense. It was mild in name. She is working to vibrate the nerves of the vandals. In the Police Dog Squad It had made its own mark. Soumya, who was the master of scrutiny from the local level elections to the arrival of Prime Minister Narendra Modi, is now a memory. Remaining Her track record.

Exit mobile version