SUDDIKSHANA KANNADA NEWS/ DAVANAGERE/ DATE:27-01-2025
ದಾವಣಗೆರೆ: ಪ್ರಸಕ್ತ ಸಾಲಿನ ಡಿ.ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕಾಗಿ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 5 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಸಿಎಂ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.
ಅವಧಿ ವಿಸ್ತರಣೆ:
ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಹೆಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಸಿಎಂ ಇಲಾಖೆ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.