ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ವಿದ್ಯುಚ್ಚಕ್ತಿ ಖಾಸಗೀಕರಣ ಮಾಡಬಾರದು, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ಆಗ್ರಹಿಸಿ ರೈತರಿಂದ ರೈಲು ತಡೆ ನಡೆಸಿ ಆಕ್ರೋಶ

On: March 1, 2024 10:03 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ದಾವಣಗೆರೆ: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ಜಾರಿ ಮಾಡಬೇಕು ಮತ್ತು ವಿದ್ಯುಚ್ಛಕ್ತಿ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರುಸೇನೆ ಹುಚ್ಚವ್ವನಳ್ಳಿ ಮಂಜುನಾಥ್ ಬಣ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ನಗರದಲ್ಲಿ ರೈಲು ತಡೆ ಯತ್ನ ನಡೆಸಲಾಯಿತು.

ಜಯದೇವ ವೃತ್ತದಿಂದ ಹೊರಟ ನೂರಾರು ಪ್ರತಿಭಟನಾಕಾರರು ರೈಲು ನಿಲ್ದಾಣದತ್ತ ನಡೆದು ರೈಲು ತಡೆಗೆ ಮುಂದಾದರು. ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದರು.
ಈ ವೇಳೆ ರೈತರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು. ನಂತರ ಸ್ಥಳಕ್ಕೆ ಆಗಮಿಸಿದ ರೈಲು ನಿಲ್ದಾಣ ಪ್ರಬಂಧಕರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಲು ರಾಜ್ಯದ ಎಲ್ಲಾ ರೈತರು ದೆಹಲಿಗೆ ಹೋಗಲು
ಸಾಧ್ಯವಿಲ್ಲ. ರೈತರ ಪರವಾಗಿ ಕೆಲಸ ಮಾಡಬೇಕಾದ ಸಂಸದರು ನಿದ್ರೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಮೇಲೆ ಗೂಂಡಾಗಿರಿ ಮಾಡುತ್ತಿದೆ, ಸರ್ಕಾರಕ್ಕೆ ರೈತರು ಬಿಸಿ ಮುಟ್ಟಿಸಲು ಈ ರೀತಿಯ ಚಳುವಳಿ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಆಲೂರು ಪರಶುರಾಮ್ ಮಾತನಾಡಿ, ಕೂಡಲೇ ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡದಿದ್ದರೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಮರಣ ಶಾಸನವನ್ನು ರೈತರು ಬರೆಯಬೇಕಾಗುತ್ತದೆ. ಕೇಂದ್ರ ಸರ್ಕಾರಕ್ಕೆ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಲು ಹೆಚ್ಚಿನ ಕಾಳಜಿ ಇರುತ್ತದೆ. ಆದರೆ ರೈತರ ಸಾಲ ಮನ್ನಾ ವಿಚಾರ, ಸ್ವಾಮಿನಾಥನ್ ವರದಿ ಜಾರಿ, ಬೆಂಬಲ ಬೆಲೆ, ರೈತರಿಗೆ ಪಿಂಚಣಿ ಮೊದಲಾದ ರೈತಪರ
ಕಾರ್ಯಕ್ರಮಗಳನ್ನು ಜಾರಿಗೆ ತರಲು ಮನಸು ಇಲ್ಲ ಎಂದು ಆರೋಪಿಸಿದರು.

ರೈತರು ನ್ಯಾಯ ಕೇಳಿದರೆ ಗೋಲಿಬಾರ್ ಮಾಡುತ್ತಾರೆ, ಇದು ದೇಶದ ರೈತನಿಗೆ ಮಾಡುವ ಅಪಮಾನವಾಗಿದೆ. ರೈತರು ಗುಲಾಮರು ಅಲ್ಲ, ಭಿಕ್ಷುಕರು ಅಲ್ಲ. ಯಾವುದೇ ರಾಜಕೀಯ ಪಕ್ಷಕ್ಕೆ ಅಧಿಕಾರ ಶಾಶ್ವತ ಅಲ್ಲ. ಕೂಡಲೇ ಸಮಸ್ಯೆ ಬಗೆಹರಿಸಿ ಅನ್ನದಾತನ ಋಣ ತೀರಿಸಿ ಎಂದು ಮೂಲಕ ಅಕ್ರೋಶ ವ್ಯಕ್ತಪಡಿಸಿದರು.

ನಿಟುವಳ್ಳಿ ಪೂಜಾರ ಅಂಜಿನಪ್ಪ ಮಾತನಾಡಿ, ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ಹೋರಾಟದ ರೈತರು ಯಾರು ದೇಶದ್ರೋಹಿಗಳಲ್ಲ. ದೆಹಲಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಭೂಪಾಲ್‌ನಲ್ಲಿ ತಡೆದು ಪೊಲೀಸರ ಮೂಲಕ ಬಂಧಿಸಿ ಮೂರು ದಿನದ ನಂತರ ವಾಪಸ್ ಕಳಿಸಲಾಗಿದೆ. ದೆಹಲಿಯಲ್ಲಿ ಹೋರಾಟ ಮಾಡುವ ಪಂಜಾಬ್, ಹರಿಯಾಣ ರೈತರನ್ನ ದೇಶ ವಿರೋಧಿಗಳು ಎನ್ನುತ್ತಾರೆ. ಇದರ ಅರ್ಥ ಏನು? ರೈತರು ಸಮಸ್ಯೆ ಬಗೆಹರಿಯುವ ತನಕ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಎಚ್ಚರಿಕೆ ನೀಡುತ್ತಿದ್ದೇವೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ್, ರಾಜಸ್ಥಾನ ರೈತರ ಹೋರಾಟಕ್ಕೆ ನಾವು ಸದಾ ಜೊತೆಯಾಗಿರುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪಾಮೇನಹಳ್ಳಿ ಗೌಡ್ರು ಶೇಖರಪ್ಪ, ಕೋಗಲೂರು ಕುಮಾರ್, ರಾಜನಹಟ್ಟಿ ರಾಜು, ಗೌಡಗೊಂಡನಹಳ್ಳಿ ಸತೀಶ, ಕೋಲ್ಕುಂಟೆ ಬಸವರಾಜ್, ಕುಕ್ಕವಾಡ ಬಸವರಾಜ್, ಕುರ್ಕಿ ಹನುಮಂತ, ಹೂವಿನ ಮಡು ನಾಗರಾಜ್, ಬುಳ್ಳಾಪುರ ನಾಗರಾಜ್, ಹುಚ್ಚವ್ವನಹಳ್ಳಿ ಪ್ರಕಾಶ್, ಗುಮ್ಮನೂರು ಭೀಮೇಶ್, ರುದ್ರೇಶ್, ಹೊನ್ನೂರು ಮಂಜುನಾಥ್, ಐಗೂರು ಈರಣ್ಣ ಸೇರಿದಂತೆ ನೂರಕ್ಕೂ ಅಧಿಕ ರೈತರು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment