SUDDIKSHANA KANNADA NEWS/ DAVANAGERE/ DATE-06-05-2025
ದಾವಣಗೆರೆ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಗಾಗಿ ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ಸರ್ಕಾರದಲ್ಲಿ ಹಣವಿದೆ. ಭತ್ತ ಎಷ್ಟದ್ದಿರೂ ಖರೀದಿ ಮಾಡಲಾಗುವುದು. ಆದರೆ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ರೈತರಿಗೆ ಕರೆ ನೀಡಿದರು.
ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿ, ಖರೀದಿ ನೋಂದಣಿಗಾಗಿ ದಿನಾಂಕ ವಿಸ್ತರಣೆ ಮಾಡಿ, ರೈತ ಪರ ಕಾಳಜಿ ತೋರಿದ ಜಿಲ್ಲಾಧಿಕಾರಿಯವರನ್ನು ಜಿಲ್ಲಾ ರೈತರ ಒಕ್ಕೂಟದ ನಿಯೋಗ ಅವರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದಾಗ ರೈತ ಮುಖಂಡರೊಂದಿಗೆ ಅವರು ಮಾತನಾಡಿದರು.
ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದ ರೈತರಿಗೆ ಭತ್ತದ ದರ ಕುಸಿತದಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ. ರೈತರ ಸಂಕಷ್ಟಕ್ಕೆ ಧಾವಿಸುವ ದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ತೆರೆದು ಭತ್ತ ಖರೀದಿಸುವ ತೀರ್ಮಾನಿಸಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ತೇಜಸ್ವಿ ಪಟೇಲ್, ಕೊಳೇನಹಳ್ಳಿ ಬಿ ಎಂ ಸತೀಶ್, ಲೋಕಿಕೆರೆ ನಾಗರಾಜ್, ಧನಂಜಯ ಕಡ್ಲೆಬಾಳ್, ಎನ್.ರಾಜಶೇಖರನಾಗಪ್ಪ, ಕುರ್ಕಿ ರೇವಣಸಿದ್ದಪ್ಪ, ಕುಕ್ಕುವಾಡದ ಡಿ.ಬಿ.ಶಂಕರ್, ಬಾತಿ ಬಿ.ಕೆ.ಶಿವಕುಮಾರ್, ಎನ್.ಹೆಚ್.ಹಾಲೇಶ್, ರಾಜು ತೋಂಟಪುರ, ಕೆ.ಜಿ.ಕಲ್ಲಪ್ಪ, ವಾಟರ್ ಮಂಜುನಾಥ, ಬಸವರಾಜಯ್ಯ, ಕೊಟ್ರೇಶಗೌಡ್ರು ಮುಂತಾದವರು ಉಪಸ್ಥಿತರಿದ್ದರು.