SUDDIKSHANA KANNADA NEWS/ DAVANAGERE/ DATE:23-08-2024
ದಾವಣಗೆರೆ: ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖಾ ವತಿಯಿಂದ ಜೈವಿಕ ಕೇಂದ್ರದಲ್ಲಿ ಉತ್ತಮ ಗುಣಮಟ್ಟದ ತಳಿಯ ಅಂಗಾಂಶ ಬಾಳೆ ಸಸಿಗಳು, ಜೈವಿಕ ನಿಯಂತ್ರಕಗಳಾದ ಟ್ರೈಕೋಡರ್ಮ, ಸೊಡೊಮೋನಾಸ್ ಹಾಗೂ ಜೈವಿಕ ಗೊಬ್ಬರಗಳಾದ ದ್ರವರೂಪದ ಜೈವಿಕ ಗೊಬ್ಬರ ಘನರೂಪದ ಜೈವಿಕ ಗೊಬ್ಬರ, ಅಜಟೋಬ್ಯಾಕ್ಟರ್, ಜೈವಿಕ ಗೊಬ್ಬರಗಳನ್ನು ತಯಾರು ಮಾಡಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಜೈವಿಕ ಗೊಬ್ಬರಗಳು ಮಣ್ಣಿನ ಜೈವಿಕ ಮತ್ತು ಭೌತಿಕ ಗುಣಗಳನ್ನು ಕಾಪಾಡಿ ಭೂಮಿಯ ಫಲವತ್ತತೆ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಜೈವಿಕ ಗೊಬ್ಬರಗಳನ್ನು ಮಣ್ಣಿಗೆ ಸೇರಿಸುವುದರಿಂದ ನಿರೀಕ್ಷಿತ ಫಲಿತಾಂಶ ದೊರೆಯುತ್ತದೆ. ಆಸಕ್ತ ರೈತರು ಜೈವಿಕ ಗೊಬ್ಬರ ಖರೀದಿಸಲು ಮೊ.ಸಂ:9611556835, ಅಂಗಾಂಶ ಬಾಳೆ ಸಸಿಗಳನ್ನು ಖರೀದಿಸಲು ಮೊ.ಸಂ:8197954070 ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
