ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ಬಾರೆ ಬಾರೆ ಸರಸಕೆ” ಎಂದ… ಒಪ್ಪದಿದ್ದಕ್ಕೆ ನಿಶ್ಚಿತಾರ್ಥವಾಗಿದ್ದ ಅಪ್ರಾಪ್ತೆ ವಧು ಮೇಲೆ ಅತ್ಯಾಚಾರ ಎಸಗಿ ಕೊಂದ!

On: September 6, 2025 1:08 PM
Follow Us:
ವಧು
---Advertisement---

SUDDIKSHANA KANNADA NEWS/ DAVANAGERE/DATE:06_09_2025

ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ನಿಶ್ಚಿತಾರ್ಥದ ವಧು, ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ ಕಾರಣ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ.

READ ALSO THIS STORY: ಕ್ರೆಡಿಟ್ ಸ್ಕೋರ್ ಹೆಚ್ಚಾಗಬೇಕಾ? ಈ 7 ಅಂಶಗಳನ್ನು ಫಾಲೋ ಮಾಡಿ ಸಾಕು!

ಆರೋಪಿ ನೀಲೇಶ್ ಧೋಂಗ್ಡಾ ಎಂಬಾತ ಬಿಬಲ್ಧರ್ ಗ್ರಾಮದಲ್ಲಿರುವ ಬಾಲಕಿಯ ಮನೆಗೆ ಭೇಟಿ ನೀಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಆರೋಪಿಯು ಸಂತ್ರಸ್ತೆಯ ಪೋಷಕರು ತಮ್ಮ ಜಮೀನಿಗೆ ಹೋಗಿದ್ದ ಮಧ್ಯಾಹ್ನ ಆಕೆಯನ್ನು ಭೇಟಿ ಮಾಡಿದ್ದ. ಈ ಸಮಯದಲ್ಲಿ, ಆಕೆಯೊಂದಿಗೆ ಆತ್ಮೀಯ ಸಂಬಂಧ ಹೊಂದಲು ಒತ್ತಾಯಿಸಿದ್ದ. ಆದರೆ, ಆಕೆ ನಿರಾಕರಿಸಿದ್ದಳು. ನಂತರ ಆಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ತಕ್ಷಣ ಗ್ರಾಮದ ಬಳಿಯ ಕಾಡಿಗೆ ಓಡಿಹೋಗಿದ್ದ. ಆ ಸಂಜೆ ಸಂತ್ರಸ್ತೆಯ ಪೋಷಕರು ಹೊಲದಿಂದ ಮನೆಗೆ ಹಿಂದಿರುಗಿದಾಗ, ತಮ್ಮ ಮಗಳು ಮೃತಪಟ್ಟಿರುವುದು ಗೊತ್ತಾಗಿದೆ. ಸಂತ್ರಸ್ತೆಯ ತಾಯಿಯ ದೂರಿನ ಆಧಾರದ ಮೇಲೆ
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನಂತರ ಆರೋಪಿಯನ್ನು ಬಂಧಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment