ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

“ರೈಲು, ಬಸ್ಸಿಗೆ ಬೆಂಕಿ ಇಡಿ, ಸಾಯಿರಿ, ದಂಗೆ ಏಳಿ”: ದಾವಣಗೆರೆ “ಕೈ” ಮುಖಂಡನ ಪ್ರಚೋದನಾತ್ಮಕ ಮಾತುಗಳಿಗೆ ಆಕ್ರೋಶದ ಜ್ವಾಲೆ!

On: April 11, 2025 11:27 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:11-04-2025

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಆಡಿದ ಮಾತುಗಳ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಜೊತೆಗೆ ಉದ್ರೇಕಿಸುವ, ಪ್ರಚೋದಿಸುವ ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವಂತ ಮಾತುಗಳನ್ನು ಆಡಿರುವುದು ರಾಜ್ಯ ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ.

ಮೂರು ನಿಮಿಷ 28 ಸೆಕೆಂಡ್ ವಿಡಿಯೋ ಮಾಡಿ ಹರಿಬಿಡಲಾಗಿದ್ದು, ಈ ವಿಡಿಯೋದಲ್ಲಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಅಹ್ಮದ್ ಕಬೀರ್ ಅಲಿಯಾಸ್ ಅಹ್ಮದ್ ಖಾನ್ ಎಂಬಾತನೇ ಇಂಥ ಮಾತುಗಳನ್ನು ಆಡಿರುವುದು.

ಕೋಮುಪ್ರಚೋದಕ, ಯುವಕರ ಮನಸ್ಸು ಕೆಡಿಸುವಂಥ ಮಾತುಗಳೇ ಹೆಚ್ಚಾಗಿವೆ. ಇದು ಕೇಸರಕಲಿಗಳನ್ನು ಕೆರಳಿ ಕೆಂಡವಾಗಿಸಿದೆ.

ವಿಡಿಯೋದಲ್ಲಿ ಆಡಿರುವ ಮಾತುಗಳೇನು…?

ವಕ್ಫ್ ಮಸೂದೆ ತಿದ್ದುಪಡಿ ಒಪ್ಪಲು ಸಾಧ್ಯವಿಲ್ಲ. ಕೇವಲ ಪ್ರತಿಭಟನೆ ನಡೆಸಿದರೆ, ಬ್ಯಾನರ್ ಹಿಡಿದು ಓಡಾಡಿದರೆ ಏನೂ ಆಗಲ್ಲ. ಸಿಎಂ, ಡಿಸಿಎಂ, ಡಿಸಿಗೆ ಮನವಿ ಕೊಟ್ಟರೆ ಬೇಡಿಕೆ ಈಡೇರಲ್ಲ. ಎಲ್ಲರೂ ರಸ್ತೆಗೆ ಇಳಿಯಬೇಕು. ಏನ್ ಬೇಕಾದರೂ
ಮಾಡಿ. ಬೆಂಕಿ ಇಡಿ, ಸಾಯಿರಿ. ಜೀವ ಬಲಿ ಕೊಡಬೇಕು ಎಂದು ಹೇಳಿದ್ದಾನೆ.

ಗ್ರಾಮದಲ್ಲಿ 10ರಿಂದ 15 ಜನ ಸಾಯಬೇಕು. ತಲೆಹೊಡೆಯೋ ಕೆಲಸ ಮಾಡಬೇಕು. ಬಸ್ ಗೆ, ರೈಲಿಗೆ ಬೆಂಕಿ ಇಡಬೇಕು. ಕೆಲವನ್ನು ಹೇಳದೆಯೇ ಮಾಡಬೇಕು. ಯೋಜನೆ ರೂಪಿಸಿ ಮಾಡುವುದಲ್ಲ. ಊರಿನ ಪ್ರಮುಖರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.
ಭಾರತದಲ್ಲಿ ನಮಗೆ ಯಾವ ನಾಯಕ ಇಲ್ಲ. ನಾಯಕನೆಂದುಕೊಂಡಿದ್ದರೂ ಒಪ್ಪಲು ಆಗುತ್ತಿಲ್ಲ. ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಬಂದ್ ಮಾಡಿ, ಬೆಂಕಿ ಇಡಿ, ಒಡೆದು ಹಾಕಿ, ಮುರಿದು ಹಾಕಿ. ಏನೇ ಆದರೂ
ತಲೆಕೆಡಿಸಿಕೊಳ್ಳಬೇಡಿ. ನಿಮ್ಮ ಸಮಯಕ್ಕೆ ದೊಡ್ಡವರು ಬೆಂಬಲವಾಗಿ ನಿಲ್ತಾರೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದಾನೆ.

ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment