Site icon Kannada News-suddikshana

ಹೊನ್ನಾಳಿ, ನ್ಯಾಮತಿಯಲ್ಲಿ ಪ್ರವಾಹ ಭೀತಿ: 8 ಕುಟುಂಬದ 33 ಮಂದಿ ಸ್ಥಳಾಂತರ

ದಾವಣಗೆರೆ: ತುಂಗಭದ್ರ ನದಿಯಿಂದ 1.12 ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿಯುತ್ತಿರುವುದರಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿಯಲ್ಲಿ ಪ್ರವಾಹ ಭೀತಿ ತಲೆದೋರಿದೆ.

READ ALSO THIS STORY: ತುಂಗಭದ್ರ ನದಿಯಲ್ಲಿ 1.12 ಲಕ್ಷ ಕ್ಯೂಸೆಕ್ಸ್ ನೀರು: ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ನದಿ, ಹೆಲ್ಪ್ ಲೈನ್ ನಂಬರ್ ಇಲ್ಲಿದೆ ನೋಡಿ!

ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಲಾಗಿದೆ.

ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು  ಒದಗಿಸಲಾಗಿರುತ್ತದೆ. ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು
ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಿದೆ ಹಾಗೂ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇಧಿಸಿದೆ.

Exit mobile version