ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

On: October 14, 2025 6:09 PM
Follow Us:
ತ್ಯಾಜ್ಯ
---Advertisement---

SUDDIKSHANA KANNADA NEWS/DAVANAGERE/DATE:14_10_2025

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಎಲ್ಲಾ ವಾರ್ಡ್‍ಗಳಿಂದ ಆಟೋ ಟಿಪ್ಪರ್‍ಗಳ ಹಸಿ ಮತ್ತು ಒಣ ಕಸಗಳಾಗಿ ವಿಂಗಡಿಸಿದ ರೂಪದಲ್ಲಿ ಸಂಗ್ರಹಿಸಲಾಗುತ್ತಿದೆ.

READ ALSO THIS STORY: ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ಪ್ರತಿನಿತ್ಯ ಸಂಗ್ರಹಿಸಲಾಗುವ ಸುಮಾರು 100 ಟನ್ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಸಿಟಿ ಕಾಂಪೋಸ್ಟ್ ತಯಾರಿಸಲಾಗುತ್ತಿದೆ. 50 ಟನ್ ಒಣ ತ್ಯಾಜ್ಯವನ್ನು ಶ್ರೇಡಿಂಗ್ ಅಂಡ್ ಬೇಲಿಂಗ್ ಮಾಡಿ ಪರ್ಯಾಯ ಇಂಧನವಾಗಿ ಉಪಯೋಗಿಸಲು ಸಿಮೆಂಟ್ ಕಾರ್ಖಾನೆಗಳಿಗೆ ಕಳುಹಿಸಲಾಗುತ್ತಿದೆ.

ಪ್ರತ್ಯೇಕವಾಗಿ ಸಂಗ್ರಹಿಸುವ 1 ರಿಂದ 2 ಟನ್‍ಗಳನ್ನು ಸ್ಯಾನಿಟರಿ ನ್ಯಾಪ್‍ಕಿನ್/ಡ್ರೈಪರ್ ಗಳಂಥ ಅಪಾಯಕಾರಿ ತ್ಯಾಜ್ಯವನ್ನು ಇನ್‍ಸಿನರೇಟ್‍ಗಳಲ್ಲಿ ಸುಡುವ ಮೂಲಕ ವೈಜ್ಞಾನಿಕವಾಗಿ ವಿಲೇಪಡಿಸಲಾಗುತ್ತಿದೆ.

ಹೀಗೆ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಸಂಪೂರ್ಣ ತ್ಯಾಜ್ಯವನ್ನು ವಿಲೇಪಡಿಸುತ್ತಿದ್ದು ಸಾರ್ವಜನಿಕರು ತ್ಯಾಜ್ಯವನ್ನು ಹೊರಗೆ ಎಸೆಯದೇ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ವಿಂಗಡಿಸಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ ಸಹಕರಿಸುತ್ತಿರುವುದರಿಂದ ಇದು ಸಾಧ್ಯವಾಗಿದೆ.

ಕೆಲವು ಪ್ರದೇಶಗಳಲ್ಲಿ ದೂರದಿಂದ ವಾಹನಗಳಲ್ಲಿ ಬರುವ ಅನಾಗರಿಕರು ತ್ಯಾಜ್ಯವನ್ನು ಎಸೆಯುತ್ತಿರುವ ಪ್ರಕರಣಗಳು ಕಂಡುಬಂದಿದ್ದು, ನಾಗರೀಕ ಪ್ರಜ್ಞೆ ಹಾಗೂ ಪರಿಸರ ಪ್ರಜ್ಞೆಯನ್ನು ರೂಢಿಸಿ ಕೊಳ್ಳುವಂತೆ ಮನವಿ ಮಾಡುತ್ತಾ ಅ.20 ರಿಂದ 22 ರವರೆಗೆ ಆಚರಿಸಲಾಗುವ ನರಕ ಚತುರ್ದಶಿ, ದೀಪಾವಳಿ ಹಾಗೂ ಬಲಿಪಾಡ್ಯಮಿ ದಿನಗಳಂದು ಪೂಜಾ ಕಾರ್ಯಗಳಲ್ಲಿ ಉಪಯೋಗಿಸುವ ಬಾಳೆಕಂಬ, ತೋರಣ, ಹೂ ಗಳಂತಹ ಪವಿತ್ರ ತ್ಯಾಜ್ಯವನ್ನು ಹಬ್ಬದ ನಂತರ ಸಾರ್ವಜನಿಕರು, ಬೀಡಾಡಿ ನಾಯಿ ಹಂದಿಗಳು ತುಳಿದಾಡುವಂತೆ ಹೊರಗೆ ಎಸೆಯದೇ ಪ್ರತ್ಯೇಕವಾಗಿ ಸಂಗ್ರಹಿಸಿಟ್ಟ ಕಡ್ಡಾಯವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡುವಂತೆ ಹಾಗೂ ಸಾಧ್ಯವಾದಷ್ಟು ಮಟ್ಟಿಗೆ ನಮ್ಮ ಮಕ್ಕಳ, ಹಿರಿಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪಟಾಕಿಗಳನ್ನು ಸಿಡಿಸದೇ ದೀಪಗಳನ್ನು ಹಚ್ಚುವ ಮೂಲಕ ಸ್ವಚ್ಛ-ಶುಭ ದೀಪಾವಳಿಯನ್ನಾಗಿ ಆಚರಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ದಾವಣಗೆರೆ

ಆಗ್ನೇಯ ಪದವೀಧರರ ಕ್ಷೇತ್ರ, ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವುದೇಗೆ?: ದಾವಣಗೆರೆ ಡಿಸಿ ಮಹತ್ವದ ಮಾಹಿತಿ

ದಾವಣಗೆರೆ

ದಾವಣಗೆರೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣ ಬಾಡಿಗೆ ದರ ಪರಿಷ್ಕರಣೆ

Leave a Comment