SUDDIKSHANA KANNADA NEWS/ DAVANAGERE/ DATE:20-01-2025
ದಾವಣಗೆರೆ: ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಸೂಚನೆ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಸರ್ಕಾರಿ ಶಾಲೆ ಹಾಗೂ ಖಾಸಗಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ 1 ರಿಂದ 10 ನೇ ತರಗತಿ ಮಕ್ಕಳಿಗೆ ವಾರದ ಎಲ್ಲಾ ದಿನಗಳು ಮೊಟ್ಟೆ, ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕೆ ನೀಡಲು ಪ್ರತಿದಿನ ಪ್ರತಿ ವಿದ್ಯಾರ್ಥಿಗೆ ರೂ.6 ಗಳನ್ನು ಸರ್ಕಾರ ಎರಡು ದಿನ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಷನ್ನಿಂದ ಉಳಿದ ನಾಲ್ಕು ದಿನ ಪ್ರತಿ ವಿದ್ಯಾರ್ಥಿಗೆ ಮೊಟ್ಟೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ನೀಡಬೇಕು. ಆದರೆ ಕೆಲವು ಶಾಲೆಯಲ್ಲಿ ವಾರದಲ್ಲಿ ಎರಡು ಮೊಟ್ಟೆ ನೀಡಲಾಗುತ್ತದೆ ಎಂಬ ದೂರುಗಳಿವೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪ್ರಸ್ತಾಪಿಸಿದರು.
ವಿತರಣೆ ಬಗ್ಗೆ ದೂರುಗಳು ಬಾರದಂತೆ ನೋಡಿಕೊಳ್ಳಲು ಪ್ರತಿ ದಿನ ವಿತರಣೆ ಮಾಡಿ ವೀಡಿಯೋಗಳನ್ನು ಸಂಗ್ರಹಿಸಲು ಇಲಾಖೆ ಅಧಿಕಾರಿಗಳಿಗೆ ಸ