SUDDIKSHANA KANNADA NEWS/ DAVANAGERE/ DATE:09-12-2023
ಚಿತ್ರದುರ್ಗ:ಆರ್ ಎಸ್ ಎಸ್ ಕಚೇರಿಯೊಳಗೆ ದಲಿತ ಎಂಬ ಕಾರಣಕ್ಕೆ ಪ್ರವೇಶ ನೀಡಲಿಲ್ಲ ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿಕೆ ವಿಚಾರ ಮತ್ತೆ ವಿವಾದ ಸೃಷ್ಟಿಸಿದೆ.
ಹೆಡ್ಗೆವಾರ್ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ಹೆಡ್ಗೆವಾರ್ ಸ್ಮಾರಕದೊಳಗೆ ನಾನು ಹೋಗಿದ್ದ ವಿಡಿಯೋ ರಿಲೀಸ್ ಮಾಡಿ ಎಂದು ಸವಾಲು ಹಾಕಿದ್ದಾರೆ. ವಿಡಿಯೋ ರಿಲೀಸ್ ಮಾಡಿದರೆ ನಿಮ್ಮ ಮನೆಗಳಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿರುತ್ತೇನೆ ಎಂದಿದ್ದಾರೆ. ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮಾಡಿದ್ದ ಆರೋಪಕ್ಕೆ ಬಿಜೆಪಿ ನಾಯಕರು ನೀಡಿದ್ದ ಆಕ್ಷೇಪದ ಹೇಳಿಕೆಗಳಿಗೆ ಆಡಿಯೋ ಮೂಲಕ ತಿರುಗೇಟು ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಶಾಸಕ ಪಿ. ರಾಜೀವ್, ಚಲವಾದಿ ನಾರಾಯಣಸ್ವಾಮಿ, ಮತ್ತು ಸುರೇಶ್ ಕುಮಾರ್ ಅವರಿಗೆ ವಾಟ್ಸಾಪ್ ಆಡಿಯೋ ಮೂಲಕ ಸವಾಲು ಹಾಕಿದ್ದಾರೆ.
ಸಿಸಿ ಕ್ಯಾಮರಾ ದೃಶ್ಯ ಇರುತ್ತೆ ಅಲ್ವಾ ರಿಲೀಸ್ ಮಾಡಿ. ರಿಲೀಸ್ ಮಾಡಿದ್ರೆ ನಿಮ್ಮ ಮನೆ ಗೇಟ್ ಕೀಪರ್ ಆಗಿ ಕೆಲಸ ಮಾಡ್ತೇನೆ. ಕೆಲವು ತಿಂಗಳ ಹಿಂದೆ ನಾನು ಈ ವಿಷಯವನ್ನು ಹೇಳಿದ್ದರೆ ಇನ್ನಷ್ಟು ಸೀಟ್ ಕಳೆದುಕೊಳ್ತಿದ್ದರು ಎಂದು ಆಡಿಯೋ ಸಂದೇಶ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಆರ್ ಎಸ್ ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಮ್ಯೂಸಿಯಂ ಪ್ರವೇಶಕ್ಕೆ ದಲಿತ ಅನ್ನುವ ಕಾರಣಕ್ಕೆ ನನ್ನನ್ನು ನಿರಾಕರಿಸಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ನಡುವೆ ಮತ್ತೆ ಮತ್ತೆ ಬಿಜೆಪಿ ವಿರುದ್ಧ ಗೂಳಿಹಟ್ಟಿ ಶೇಖರ್ ವಾಕ್ಪ್ರಹಾರ ನಡೆಸಿದ್ದಾರೆ.