SUDDIKSHANA KANNADA NEWS/ DAVANAGERE/ DATE:15-02-2024
ಬಿಪಿಎಲ್, ಎಪಿಎಲ್ ಕಾರ್ಡ್ ಪಡೆಯಬೇಕಾ… ಹಾಗಿದ್ರೆ ನಿಮಗೆ ಸಿಹಿ ಸುದ್ದಿ: ಏಪ್ರಿಲ್ 1ರಿಂದ ಕಾರ್ಡ್ ವಿತರಣೆ ಮಾಡುವುದಾಗಿ ಸರ್ಕಾರ ಘೋಷಣೆ
ಬೆಂಗಳೂರು: ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31 ರೊಳಗೆ ಪರಿಶೀಲನೆ ನಡೆಸಿ ಏಪ್ರಿಲ್ 1 ರಿಂದ ವಿತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಉತ್ತರಿಸುತ್ತಾ ಈ ವಿಷಯ ತಿಳಿಸಿದರು.
ವಿಧಾಸಭೆ ಚುನಾವಣೆ ಬಂತು ಅಂತ ಹಿಂದಿನ ಸರ್ಕಾರ 2.95 ಲಕ್ಷ ಕಾರ್ಡ್ ಗಳನ್ನು ವಿತರಿಸದೆ ಬಾಕಿ ಉಳಿಸಿಕೊಂಡಿತ್ತು. ಆದರೆ ನಾವು ಇಲ್ಲಿಯವರೆಗೆ 57 ಸಾವಿರ ಹೊಸ ಕಾರ್ಡ್ ವಿತರಿಸಿದ್ದೇವೆ. ಆರೋಗ್ಯ ಚಿಕಿತ್ಸೆಗಾಗಿ ಅರ್ಜಿ ಸಲ್ಲಿಸಿದವರಿಗೆ ತಕ್ಷಣ ಕಾರ್ಡ್ ವಿತರಿಸಲು ಸೂಚಿಸಿದ್ದೇವೆ. ಆರೋಗ್ಯ ತುರ್ತು ಕಾರಣಕ್ಕೆ 744 ಜನರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ಮುಂದಿನ ಮಾರ್ಚ್ 31 ರೊಳಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ಗಳನ್ನು ವಿತರಿಸುವ ತೀರ್ಮಾನ ಕೈಗೊಂಡಿದ್ದೇವೆ. ಈ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದರು.