ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಶರಣಾಗಿ ಮುಖ್ಯವಾಹಿನಿಗೆ ಬರಲು ನಕ್ಸಲರಿಗೆ ಸರ್ಕಾರ ಕರೆ; ಪುನರ್ವಸತಿ, ಕಾನೂನಿನ ನೆರವು ನೀಡುವ ಭರವಸೆ!

On: December 31, 2024 9:35 AM
Follow Us:
---Advertisement---

ಬೆಂಗಳೂರು: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಮುಖ್ಯವಾಹಿನಿಗೆ ಬರಲು ಸರ್ಕಾರ ಕರೆ ನೀಡಿದೆ. ಪ್ರಗತಿಪರರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ವಿವಿಧ ಪ್ರಗತಿಪರ ಹಾಗೂ ಜನಪರ ವೇದಿಕೆಗಳ ಮುಖಂಡರು ಮನವಿ ಮಾಡಿದ್ದರು. ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸಿದ್ದು, ಜೀವಹಾನಿಯು ಯಾವ ಕಡೆಯು ನಡೆಯಬಾರದು ಎಂದು ಮನವಿ ಮಾಡಿದ್ದರು.

ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ನೆಲೆಸುವಂತೆ ಮಾಡಲು ಸರ್ಕಾರವು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಹಿಂಜರಿಯುವುದಿಲ್ಲ. ಆದರೆ, ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಮುಂದಾಗಿದ್ದರೆ, ಈ ಪ್ರಕ್ರಿಯೆಯನ್ನು ಸರ್ಕಾರ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ಸಿಎಂ ಕಚೇರಿ ತಿಳಿಸಿದೆ.

ನಕ್ಸಲೀಯ ಚಟುವಟಿಕೆಗಳು ಕರ್ನಾಟಕದಲ್ಲಿ ಎಂದೂ ನೆರೆಯ ರಾಜ್ಯಗಳಂತೆ ವಿಪರೀತ ಪ್ರಮಾಣದಲ್ಲಿ ನಡೆದಿಲ್ಲ. ಆದರೆ, ಮಲೆನಾಡಿನಲ್ಲಿ ಎರಡು ದಶಕಗಳಿಂದ ಆಗಾಗ್ಗೆ ನಕ್ಸಲೀಯ ಚಟುವಟಿಕೆಗಳು ಕಾಣುತ್ತಲಿವೆ. ಆ ಕಾರಣದಿಂದ ಹಿಂಸೆ ಹಾಗೂ ಸಾವು-ನೋವುಗಳು ಸಂಭವಿಸಿವೆ. ಹಲವಾರು ಅಮಾಯಕರ, ಪೊಲೀಸರ ಮತ್ತು ನಕ್ಸಲೀಯ ಚಟುವಟಿಕೆಗಳಲ್ಲಿ ಇದ್ದವರ ಜೀವಹಾನಿಯೂ ಆಗಿದೆ. ಆದರೆ, ಪ್ರಜಾತಾಂತ್ರಿಕ ಸಮಾಜದಲ್ಲಿ ಬಂದೂಕಿನ ಮೂಲಕ ಬದಲಾವಣೆ ತರಲು ಹೊರಟಿರುವ ಆದರ್ಶವಾದಿಗಳು ತಮ್ಮ ಜೀವವನ್ನೂ ತೆತ್ತುಕೊಳ್ಳುತ್ತಾರೆ, ಇತರರ ಜೀವಹಾನಿಗೂ ಕಾರಣವಾಗುತ್ತಾರೆ. ಇದು ನೋವಿನ ವಿಚಾರವಾದರೂ ಸಂವಿಧಾನಬದ್ಧವಾಗಿ ಆಡಳಿತ ನಡೆಸುವ ಸರ್ಕಾರ ಸುಮ್ಮನೇ ಕೂರುವುದು ಸಾಧ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.

ಕರ್ನಾಟಕದ ಎಲ್ಲಾ ನಕ್ಸಲೀಯರು ಸಂಪೂರ್ಣವಾಗಿ ಶರಣಾಗತರಾಗಿ ಹಾಗೂ ಮುಖ್ಯವಾಹಿನಿಗೆ ಬರಲು ನಮ್ಮ ಸರ್ಕಾರವು ಬಯಸುತ್ತದೆ. ನಕ್ಸಲೀಯರು ಮುಖ್ಯವಾಹಿನಿಗೆ ಬರಲು ಮುಂದಾದ್ದಲ್ಲಿ ಶರಣಾಗತಿ ಕುರಿತು ಈಗಾಗಲೇ ಸರ್ಕಾರವು ನೀತಿಯನ್ನು ರೂಪಿಸಿದೆ. ಈ ನೀತಿಯನ್ನು ಸರಳೀಕರಣಗೊಳಿಸಿ, ಸಮಪರ್ಕವಾಗಿ ಜಾರಿ ಮಾಡಲಾಗುವುದೆಂದು ಭರವಸೆ ನೀಡುತ್ತೇವೆ ಎಂದು ಸಿಎಂ ಕಚೇರಿ ತಿಳಿಸಿದೆ.

ನಕ್ಸಲೀಯರ ಶರಣಾಗತಿ ನೀತಿಯನ್ವಯ ಹಂತ ಹಂತವಾಗಿ ಆರ್ಥಿಕ ನೆರವು ನೀಡಲಾಗುವುದು ಹಾಗೂ ಆಯುಧಗಳನ್ನು ಸರ್ಕಾರಕ್ಕೆ ಅದ್ಯಾರ್ಪಣೆ ಮಾಡುವ ನಕ್ಸಲೀಯರಿಗೆ ಪ್ರೋತ್ಸಾಹ ಧನ ನೀಡುತ್ತೇವೆ. ಕೌಶಲ್ಯ ತರಬೇತಿಗಳು ನೀಡುವುದಲ್ಲದೆ ಅವರುಗಳ ಪುನರ್ವಸತಿಗೂ ಸಹ ಎಲ್ಲ ಕ್ರಮಗಳನ್ನು ಸಹಾನುಭೂತಿಯಿಂದ ಹಾಗೂ ಆದ್ಯತೆ ಮೇರೆಗೆ ಪರಿಗಣಿಸಲು ಕ್ರಮವಹಿಸಲಾಗುವುದು. ಅವರ ಮೇಲಿನ ಮೊಕದ್ದಮೆ / ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ಹಾಗೂ ಅವರಿಗೆ ಕಾನೂನಿನ ನೆರವು ಸಹ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.

Join WhatsApp

Join Now

Join Telegram

Join Now

Leave a Comment