• ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
Thursday, May 22, 2025
Social icon element need JNews Essential plugin to be activated.
Kannada News-suddikshana
No Result
View All Result
  • Login
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ
No Result
View All Result
Morning News
No Result
View All Result

ಬಡವರ ಮಕ್ಕಳು ಐಎಎಸ್,ಐಪಿಎಸ್ ಆಗಬೇಕೆಂಬ ಕನಸು ನನಸಾಗಿಸಲು ಶ್ರಮ: ಜಿ. ಬಿ. ವಿನಯ್ ಕುಮಾರ್

Editor by Editor
March 18, 2025
in ದಾವಣಗೆರೆ, ಬೆಂಗಳೂರು
0
ಬಡವರ ಮಕ್ಕಳು ಐಎಎಸ್,ಐಪಿಎಸ್ ಆಗಬೇಕೆಂಬ ಕನಸು ನನಸಾಗಿಸಲು ಶ್ರಮ: ಜಿ. ಬಿ. ವಿನಯ್ ಕುಮಾರ್

SUDDIKSHANA KANNADA NEWS/ DAVANAGERE/ DATE:18-03-2025

ದಾವಣಗೆರೆ: ಬಡವರ ಮಕ್ಕಳು ಐಎಎಸ್, ಐಪಿಎಸ್ ಆಗಬೇಕೆಂಬ ಕನಸು ಕಂಡಿದ್ದೇನೆ. ಹಾಗಾಗಿ, ರಾಜ್ಯದ ಪ್ರತಿ ಜಿಲ್ಲೆಗಳಿಗೂ ಹೋಗುತ್ತಿದ್ದೇನೆ. ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಅವಕಾಶಗಳಿಂದ ವಂಚಿತರಾಗಬಾರದು. ಉಜ್ವಲ ಭವಿಷ್ಯ ಅವರದ್ದಾಗಬೇಕು. ಈ ನಿಟ್ಟಿನಲ್ಲಿ ಪ್ರವಾಸ ಮಾಡಿ ಶಿಕ್ಷಣದ ಮಹತ್ವ ಕುರಿತಂತೆ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದರು.

ಜಿಲ್ಲೆಯ ಹರಿಹರ ತಾಲ್ಲೂಕಿನ ಸುಕ್ಷೇತ್ರ ಯಲವಟ್ಟಿಯ ಶ್ರೀ ಗುರು ಸಿದ್ಧಾಶ್ರಮದಲ್ಲಿ ನಡೆದ ವೈರಾಗ್ಯನಿಧಿ ಶ್ರೀ ಶಿವಾನಂದ ಮಹಾಸ್ವಾಮಿಗಳವರ 20ನೇ ವರ್ಷದ ಪುಣ್ಯಾರಾಧನಾ ಹಾಗೂ ಜ್ಞಾನನಿಧಿ ಶ್ರೀ ನಿತ್ಯಾನಂದ ಮಹಾಸ್ವಾಮಿಗಳವರ 18ನೇ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಯೊಬ್ಬ ಮಕ್ಕಳೂ ಒಳ್ಳೆಯ ಶಿಕ್ಷಣ ಪಡೆಯುವಂತಾಗಬೇಕು. ಆಗ ಮಾತ್ರ ಪ್ರಪಂಚದ ಯಾವುದೇ ಮೂಲೆಯಲ್ಲಾದರೂ ಹೋಗಿ ಸ್ವಾವಲಂಬನೆ ಜೀವನ ಸಾಗಿಸಬಹುದು. ಧೈರ್ಯವೂ ಬರುತ್ತದೆ. ಸ್ವಾಭಿಮಾನದ ಬದುಕು ಸಾಗಿಸಬಹುದು. ಉಜ್ವಲ ಅವಕಾಶ ಸಿಗಲಿದೆ. ಭವಿಷ್ಯವೂ ಉತ್ತಮ ಆಗಿರುತ್ತದೆ. ಶೈಕ್ಷಣಿಕ ಕ್ರಾಂತಿಗಾಗಿ ರಾಜ್ಯ ಸುತ್ತಾಡುತ್ತಿದ್ದೇನೆ. ಗ್ರಾಮೀಣ ಪ್ರದೇಶದ ಶಾಲೆಗಳು, ಕಾಲೇಜುಗಳಿಗೆ ಹೋಗಿ ಶಿಕ್ಷಣದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇದಕ್ಕೆ ಮಠಗಳು ಹಾಗೂ ಶ್ರೀಗಳ ಆಶೀರ್ವಾದ, ಸಹಕಾರ ಬೇಕು ಎಂದು ಪ್ರತಿಪಾದಿಸಿದರು.

ಮಠಮಾನ್ಯಗಳು ಶೈಕ್ಷಣಿಕ ರಂಗದಲ್ಲಿ ಅಚ್ಚಳಿಯದ ಕೈಂಕರ್ಯ ಮಾಡಿವೆ. ಅನ್ನದಾನ, ವಿದ್ಯಾದಾನ ಮಾಡಿವೆ. ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿವೆ. ಮಠಗಳಿಂದ ಆಗಿರುವ ಸೇವಾ ಕಾರ್ಯಗಳು ಅನನ್ಯ. ನೈತಿಕತೆ, ಪ್ರಾಮಾಣಿಕತೆ ಉಳಿಯಬೇಕಾದರೆ ಇಂಥ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವಂತಾಗಬೇಕು. ಸೇವಾ ಕಾರ್ಯಗಳು ಜನಮಾನಸದಲ್ಲಿ ಉಳಿದಾಗ ಮಾತ್ರ ಧರ್ಮ ಉಳಿಯುತ್ತದೆ. ಧರ್ಮಕಾರ್ಯಗಳು ನೆನಪಿನಲ್ಲಿರುತ್ತವೆ ಎಂದು ಆಶಯ ವ್ಯಕ್ತಪಡಿಸಿದರು.

ಇಡೀ ದೇಶವೇ ತಿರುಗಿ ನೋಡುವಂತೆ ಇನ್ ಸೈಟ್ಸ್ ಐಎಎಸ್ ಸಂಸ್ಥೆ ಕಟ್ಟಿ ಬೆಳೆಸಿದ್ದೇನೆ. ಇದು ಸಾಧ್ಯವಾಗಿಸುವಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದೇನೆ. ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದೆ. ಜನರು ತೋರಿದ ಪ್ರೀತಿಗೆ ನಾನು ಎಂದಿಗೂ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.

ಬೆಂಗಳೂರು, ದಾವಣಗೆರೆಯಂಥ ನಗರಗಳಲ್ಲಿ ವಾಸ ಮಾಡುವ ನಾವೂ ನಿತ್ಯವೂ ಒತ್ತಡದಲ್ಲಿ ಜೀವನ ಸಾಗಿಸುತ್ತೇವೆ. ಆದ್ರೆ, ಮಠಕ್ಕೆ ಬಂದ ಬಳಿಕ ಇಲ್ಲಿನ ವಾತಾವರಣ, ಭಜನೆ, ಧಾರ್ಮಿಕ ಕಾರ್ಯಕ್ರಮಗಳನ್ನು ನೋಡುತ್ತಿದ್ದರೆ ಮನಸ್ಸಿಗೆ ಆನಂದವಾಗುತ್ತದೆ ಎಂದು ಜಿ. ಬಿ. ವಿನಯ್ ಕುಮಾರ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಸದ್ಗುರು ಶ್ರೀ ಯೋಗಾನಂದ ಮಹಾಸ್ವಾಮೀಜಿ ಅವರು ವಿನಯ್ ಕುಮಾರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು. ಚಿತ್ರದುರ್ಗದ ಶ್ರೀ ಸದ್ಗುರು ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ದಾವಣಗೆರೆಯ ಶ್ರೀ ಜಡೆಸಿದ್ಧ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಹದಡಿಯ ಚಂದ್ರಗಿರಿ ಸಂಸ್ಥಾನ ಮಠದ ಶ್ರೀ ಮುರುಳೀಧರ ಮಹಾಸ್ವಾಮೀಜಿ, ಹೋತನಹಳ್ಳಿಯ ಶ್ರೀ ಸಿದ್ಧಾರೂಢ ಮಠದ ಶ್ರೀ ಶಂಕರಾನಂದ ಮಹಾಸ್ವಾಮೀಜಿ, ಚಿತ್ರಭಾನುಕೋಟೆಯ ಶ್ರೀ ಕೃಷ್ಣಾನಂದ ಭಾರತಿ ಮಹಾಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹನಗವಾಡಿ ವೀರೇಶ್ ಮತ್ತು ಹಲವಾರು ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು.

Next Post
40 ಸ್ಪರ್ಧಿಗಳು ರ್ಯಾಂಪ್ ವಾಕ್ ಸೂಪರ್: ಬಾಪೂಜಿ ಮಹಿಳಾ ಸಿಬ್ಬಂದಿ ವಿಶೇಷ ಸ್ಪರ್ಧೆಯ ಝಲಕ್!

40 ಸ್ಪರ್ಧಿಗಳು ರ್ಯಾಂಪ್ ವಾಕ್ ಸೂಪರ್: ಬಾಪೂಜಿ ಮಹಿಳಾ ಸಿಬ್ಬಂದಿ ವಿಶೇಷ ಸ್ಪರ್ಧೆಯ ಝಲಕ್!

Leave a Reply Cancel reply

Your email address will not be published. Required fields are marked *

Recent Posts

  • ಈ ರಾಶಿಯವರ ಆಸ್ತಿ ವಿಭಜನೆಗೆ ಒಡಹುಟ್ಟಿದವರಿಂದ ಸಂಪೂರ್ಣ ಬೆಂಬಲ, ಈ ಮೂರು ರಾಶಿಗೆ ಒಡಹುಟ್ಟಿದವರಿಂದ ಪ್ರೇಮಿಗಳ ಮದುವೆಗೆ ಸಂಪೂರ್ಣ ಬೆಂಬಲ
  • ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿ ಕಡೆಗಣಿಸಿದ್ರಾ? ಸಂಭ್ರಮಾಚರಣೆಯಲ್ಲಿ 2 ವರ್ಷದ “ಕೈ” ಆಡಳಿತಕ್ಕೆ ಪ್ರಶಂಸೆ ವ್ಯಕ್ತಪಡಿಸಲಿಲ್ಲ ಯಾಕೆ?
  • ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ
  • ಮೂವರು ಮನೆಗಳ್ಳರ ಸೆರೆ: 7,30,000 ರೂ. ಮೌಲ್ಯದ ಚಿನ್ನಾಭರಣ ವಶ
  • “ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ”

Recent Comments

No comments to show.

Archives

  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023

Categories

  • Chitradurga
  • CINEMA
  • DHARAVADA
  • DINA BHAVISHYA
  • Home
  • Hubli
  • JOB NEWS
  • KALABURAGI
  • Mangalore
  • MYSORE
  • SHIVAMOGGA
  • STATE
  • Stock market (ಷೇರು ಮಾರುಕಟ್ಟೆ)
  • UDUPI
  • ಅಡಿಕೆ ಧಾರಣೆ ಮತ್ತು ಅಡಿಕೆ ಮಾಹಿತಿ
  • ಕನ್ನಡ ರಾಜ್ಯೋತ್ಸವ
  • ಕ್ರಿಕೆಟ್
  • ಕ್ರೀಡೆ
  • ಕ್ರೈಂ ನ್ಯೂಸ್
  • ದಾವಣಗೆರೆ
  • ನವದೆಹಲಿ
  • ಬೆಂಗಳೂರು
  • ವಾಣಿಜ್ಯ
  • ವಿದೇಶ
  • ಸಾಹಿತ್ಯ
  • ಹಾರ್ಟ್ ಬೀಟ್ಸ್- ಬದುಕು ಬೆಳಕು
  • ದಾವಣಗೆರೆ
  • ಬೆಂಗಳೂರು
  • ನವದೆಹಲಿ
  • ಕ್ರೀಡೆ
  • ಕ್ರೈಂ ನ್ಯೂಸ್
  • ವಾಣಿಜ್ಯ
  • ಸಾಹಿತ್ಯ

© 2023 Newbie Techy -Suddi Kshana by Newbie Techy.

No Result
View All Result

© 2023 Newbie Techy -Suddi Kshana by Newbie Techy.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In