Site icon Kannada News-suddikshana

ಮೇ 29 ವರೆಗೂ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

Even more rain!

ಮುಂದಿನ 6 ದಿನಗಳ ಕಾಲ ಕರ್ನಾಟಕದ 8ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಅದೆಲ್ಲವನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೆಂಗಳೂರು, ಧರ್ಮಸ್ಥಳ, ಸುಳ್ಯ, ಶಿರಾಲಿ, ಹುಂಚದಕಟ್ಟೆ, ಬಂಡೀಪುರ, ಚಾಮರಾಜನಗರ, ಗೇರುಸೊಪ್ಪ, ಹಾರಂಗಿ, ತಾಳಗುಪ್ಪ, ಭಾಗಮಂಡಲ, ಮಾಗಡಿ, ಕುಣಿಗಲ್, ತುಮಕೂರು, ಗೋಕರ್ಣ, ಕೃಷ್ಣರಾಜಪೇಟೆ, ಪುತ್ತೂರು, ಕುಮಟಾ, ಕದ್ರಾ, ಯಲ್ಲಾಪುರ, ಮಾಣಿಯಲ್ಲಿ ಮಳೆಯಾಗಿದೆ.

Exit mobile version