SUDDIKSHANA KANNADA NEWS/ DAVANAGERE/ DATE:21-10-2024
ಬೆಂಗಳೂರು: ಸಿಲಿಕಾಟನ್ ಸಿಟಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಬೆಂಗಳೂರಿನ ಕೆಲವೆಡೆಯಂತೂ ನೀರೋ ನೀರು. ಮನೆಯೊಳಗೆ, ಅಪಾರ್ಟ್ ಮೆಂಟ್ ಗಳಿಗೆ
ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ರಸ್ತೆ-ಚರಂಡಿಗಳು ತುಂಬಿ ಹರಿಯುತ್ತಿವೆ. ಅಲ್ಲದೇ ವಿವಿಧ ಏರಿಯಾಗಳಲ್ಲಿ ಮರಗಳು
ಸಹ ಮುರಿದುಬಿದ್ದು, ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ.
ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಬೆಂಗಳೂರಿನ ಎಲ್ಲಾ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.