ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸೊರಟೂರು ಸರ್ಕಾರಿ ಪ್ರೌಢಶಾಲೆ ದುರವಸ್ಥೆ ಅನಾವರಣ: ಜಿ.ಬಿ ವಿನಯ್ ಕುಮಾರ್ ಕೊಟ್ಟ ಸಲಹೆ ಏನು…?

On: June 11, 2024 9:37 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:12-06-2024

ದಾವಣಗೆರೆ: ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ. ವಿನಯ್ ಕುಮಾರ್ ಅವರು, ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಸರಕಾರಿ ಪ್ರೌಢಶಾಲಾ ಶಾಲೆಗೆ ಭೇಟಿ ನೀಡಿ, ಶಾಲಾ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ವಿನಯ್ ಕುಮಾರ್, ಮಕ್ಕಳಿಗೆ ಸಿಗುತ್ತಿರುವ ಗ್ರಾಮೀಣ ಶಿಕ್ಷಣದ ಗುಣಮಟ್ಟ, ಈ ವಾರ್ಷಿಕ ದಾಖಲಾತಿಯಂತಹ ಮುಂತಾದ ವಿಷಯಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಬಳಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ಸದಸ್ಯ ಎಂ. ಎನ್. ಹನುಮಂತಪ್ಪನವರು ಮಕ್ಕಳ ಕಲಿಕೆಗೆ ಕಂಪ್ಯೂಟರ್‌ ಗಳಿದ್ದರೂ ನಿರ್ವಹಣೆ ಕೊರತೆಯಿಂದಾಗಿ ಹಾಳಾಗಿವೆ, ಆಟದ ಮೈದಾನ, ಸಮರ್ಪಕ ಶೌಚಾಲಯ ವ್ಯವಸ್ಥೆ, ಶಾಲಾ ಕಾಂಪೌಂಡ್ ಇಲ್ಲದೇ ಇರುವುದರಿಂದ ಸುತ್ತಲಿನ ಜಮೀನುಗಳಿಂದ ಬರುವ ನೀರಿಂದ ಜಲಾವೃತಗೊಂಡ ಕಾರಣ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು ಉಲ್ಬಣ ಗೊಳ್ಳುತ್ತಿದ್ದು, ಈ ಎಲ್ಲಾ ಸಮಸ್ಯೆಗಳಿಂದಾಗಿ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ದಾಖಲಾತಿ ಮಾಡಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಮುಖ್ಯವಾಗಿ ಹಳೆಯ ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಹಲವು ಬಾರಿ ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದರೂ ಸಮಸ್ಯೆ ಬಗ್ಗೆ ಸ್ಪಂದಿಸಿಲ್ಲವೆಂದು ಉಪಸ್ಥಿತರಿದ್ದ ಗ್ರಾಮಸ್ಥರಾದ ವಿಜಯ್ ಸ್ವಾಮಿ, ಹನುಮಂತಪ್ಪ ಮಾಜಿ ಸೈನಿಕರು, ಹಾಲೇಶ್ ಕೊಡತಾಳ್, ಯೋಗೇಶ್, ರವಿ ಟಿ, ಪುಂಡಪ್ಪ, ನಾಗರಾಜ್ ಕೆ.ಡಿ, ರಮೇಶ್, ಡಿ ಹರೀಶ್ ಆರೋಪಿಸಿದರು. ಈ ವೇಳೆ ಮಾತನಾಡಿದ ವಿನಯ್ ಕುಮಾರ್ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು. ತನ್ನ ಕೈಯಲ್ಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆ ಪೊಲೀಸರ ಭರ್ಜರಿ ಬೇಟೆ: ಅಮಲು ಬರುವ ಸಿರಫ್ ಅಕ್ರಮವಾಗಿ ಮಾರಾಟ ಮಾಡ್ತಿದ್ದ ಐವರು ಆರೋಪಿಗಳ ಬಂಧನ!

ದಾವಣಗೆರೆ

ದಾವಣಗೆರೆ ವಿವಿ ಅಂತರಕಾಲೇಜು ಭಾರ ಎತ್ತುವ ಸ್ಪರ್ಧೆ: ಹೊನ್ನೂರು ಗೊಲ್ಲರಹಟ್ಟಿ ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆ

ಪ್ರಭಾ ಮಲ್ಲಿಕಾರ್ಜುನ್

ಅರಣ್ಯ ಇಲಾಖೆ ಹುದ್ದೆಗಳ ನೇರ ನೇಮಕಾತಿಗೆ ಬಿಎಸ್ಸಿ ಅರಣ್ಯ ಶಾಸ್ತ್ರ ಪದವಿ ವಿದ್ಯಾರ್ಹತೆಯನ್ನಾಗಿ ಪರಿಗಣಿಸಿ: ಡಾ. ಪ್ರಭಾ ಮಲ್ಲಿಕಾರ್ಜುನ್ ಗೆ ವಿದ್ಯಾರ್ಥಿಗಳ ಮನವಿ

ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧಕ್ಕೆ ಸರ್ಕಾರ ಕ್ರಮ: ಹಿಂದೂಗಳ ಕೆಂಗಣ್ಣಿಗೆ ಮತ್ತೆ ಗುರಿಯಾದ ಸಿಎಂ ಸಿದ್ದರಾಮಯ್ಯ!

ರಾಶಿ

ಸೋಮವಾರದ ರಾಶಿ ಭವಿಷ್ಯ 13 ಅಕ್ಟೋಬರ್ 2025

ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ: 3500 ಹುದ್ದೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

Leave a Comment