ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾಮೇಶ್ವರ ಕೆಫೆ ಬ್ಲಾಸ್ಟ್ ಕೇಸ್ ನ ಸಂಪೂರ್ಣ ಸತ್ಯ ಹೊರಗೆ ಬರಲಿ, ಸಮಾಜದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೇ ಕ್ರಮ ಕೈಗೊಳ್ಳುವಂತೆ ಹೈವೋಲ್ಟೇಜ್ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ

On: March 2, 2024 5:04 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ಬೆಂಗಳೂರು: ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಸಿಎಂ ಕೊಟ್ಟ ಸೂಚನೆಗಳೇನು..?

  • ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚನೆ
  • ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು.
  • ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ
  • ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಗೆ ಪರಿಣಾಮಕಾರಿಯಾಗಿ ಬಳಸಿ
  • ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ
  • ಪೊಲೀಸರು ಇಂಥ ಘಟನೆ ನಡೆದಾಗ ಮಾತ್ರ ಎಚ್ಚರಿಕೆ ವಹಿಸಿ ಆ ನಂತರ ಮೈ ಮರೆಯುವುದಾಗಬಾರದು
  • ಜನನಿಬಿಡ ಸ್ಥಳಗಳಲ್ಲಿ ಗಸ್ತು ಹೆಚ್ಚಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
  • ಸಾಮಾಜಿಕ ಮಾಧ್ಯಮ ಸೇರಿ ಇನ್ನಿತರೆ ಯಾವುದೇ ಒತ್ತಡಕ್ಕೆ ಒಳಗಾಗದೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ
  • ಸುಳ್ಳು ಮತ್ತು ತಪ್ಪು ಸುದ್ದಿ ಹರಡುತ್ತಿರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇಟ್ಟು ಕ್ರಮ ಜರುಗಿಸಿ: ಸಿಎಂ ಖಡಕ್ ಸೂಚನೆ
  • ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸಿಎಂ ಸೂಚನೆ ನೀಡಿದರು.

ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಚಿವ ಪ್ರಿಯಾಂಕ ಖರ್ಗೆ, ಗೃಹ ಸಚಿವ ಜಿ.ಪರಮೇಶ್ವರ್ ,ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ , ಕಾರ್ಯದರ್ಶಿ ಡಾ.
ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment