SUDDIKSHANA KANNADA NEWS/ DAVANAGERE/ DATE:07-09-2024
ದಾವಣಗೆರೆ: ಹಿಂದೂ ಮಹಾಗಣಪತಿಯ ಪ್ರತಿಷ್ಠಾಪನೆ ಹಾಗೂ ಶ್ರೀ ಭಗೀರಥ ಮಹರ್ಷಿಯ ರೂಪಕ ದರ್ಶನವನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ
ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಉದ್ಘಾಟಿಸಿದರು.
ಶಾಮನೂರು ಶಿವಶಂಕರಪ್ಪ, ಎಸ್. ಎಸ್. ಮಲ್ಲಿಕಾರ್ಜುನ್, ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಹಿಂದೂ ಮಹಾಗಣಪತಿಗೆ ಪೂಜೆ ಸಲ್ಲಿಸಿ ರೂಪಕ ಪ್ರದರ್ಶನ ವೀಕ್ಷಿಸಿದರು.
ಹಿಂದೂ ಮಹಾಗಣಪತಿ ಟ್ರಸ್ಟ್ ವತಿಯಿಂದ ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕಸಭಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಹಿಂದೂ ಮಹಾ ಗಣಪತಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಜೊಳ್ಳಿ ಗುರು ಹಾಗೂ ಟ್ರಸ್ಟ್ ನ
ಸದಸ್ಯರಾದ ಜರಿಕಟ್ಟೆ ಚಂದ್ರು, ಡಿ. ಕೆ. ಕುಮಾರ್, ಜಯಪ್ರಕಾಶ್ ಮಾಗಿ, ಆದಿತ್ಯ, ಮಂಜುನಾಥ್, ನವೀನ್ ಕುಮಾರ್, ಕಮಲ್, ಗಿರೀಶ್ ದೇವರಮನಿ, ಮುರುಗೇಶ್ ಮತ್ತಿತರರು ಹಾಜರಿದ್ದರು.