ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ನಾನು ಪರಿಸರ” ನನ್ನನ್ನು ಉಳಿಸಿ, ನಾನು ಅಪಾಯದಲ್ಲಿದ್ದೇನೆ” ಎಂಬ ಶೀರ್ಷಿಕೆಯ ವಿಜ್ಞಾನ ಮಾದರಿ ಪ್ರದರ್ಶನ ಹೇಗಿತ್ತು…?

On: March 2, 2024 9:33 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:02-03-2024

ದಾವಣಗೆರೆ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ಮಾದರಿಯ ಪ್ರದರ್ಶನವನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ಕಲೆ, ಕರಕುಶಲ ಕಲೆಯ ಮತ್ತು ವಿಜ್ಞಾನ ಮಾದರಿಯ ಹೊಸ ಆವಿಷ್ಕಾರವನ್ನು ಶಾಲೆಯ ಮಕ್ಕಳು ಅಭಿವ್ಯಕ್ತಿಸಿದರು.

ದೃಶ್ಯಕಲಾ ಮಹಾವಿದ್ಯಾಲಯ ದಾವಣಗೆರೆಯ ಪ್ರಾಚಾರ್ಯ ಡಾ. ಜಯರಾಜ್ ಎಂ. ಚಿಕ್ಕ ಪಾಟೀಲ್ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ತಿಳುವಳಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ಪ್ರಪಂಚದ ಒಳಿತಿಗಾಗಿ ಅಂತಹ ಪ್ರತಿಭೆಗಳನ್ನು ಬೆಳೆಸುವ ಮಹತ್ವವನ್ನು ಒತ್ತಿ ಹೇಳಿದರು.

ನಾನು ಪರಿಸರ” ನನ್ನನ್ನು ಉಳಿಸಿ, ನಾನು ಅಪಾಯದಲ್ಲಿದ್ದೇನೆ” ಎಂಬ ಶೀರ್ಷಿಕೆ ಅಡಿಯಲ್ಲಿ ಮಕ್ಕಳು ಪ್ರತಿಷ್ಠಾಪನ ಕಲೆಯನ್ನು ಶಾಲೆಯ ಹೊರಭಾಗದಲ್ಲಿ ಪ್ರದರ್ಶಿಸಿದರು .ಇದರ ಬಗ್ಗೆ ಮಕ್ಕಳು ಪರಿಸರದ ಪ್ರಜ್ಞೆ ಮತ್ತು ಜಾಗೃತಿ ಸಾರುವ ಕಲಾಕೃತಿ ಮಾಡಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮಕ್ಕೆ ಇನ್ನೊಬ್ಬ ಅತಿಥಿಯಾಗಿ ಆಗಮಿಸಿದ್ದ ಮೌಲಾನಾ ಮೊಹಮ್ಮದ್ ಹನೀಫ್ ರಝಾ ಅವರು ಮಾತನಾಡಿ, ಭವಿಷ್ಯದ ಪೀಳಿಗೆಗೆ ಪರಿಸರವನ್ನು ರಕ್ಷಿಸುವ ನೈತಿಕ ಅಗತ್ಯವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಜೊತೆಯಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳುವ ಕಾರ್ಯವನ್ನು ಅರ್ಥಪೂರ್ಣವಾಗಿ ಮಾಡಬೇಕು ಎಂದು ತಿಳಿಸಿದರು.

ಇಂತಹ ಪ್ರಮುಖ ವಿಷಯದ ಬಗ್ಗೆ ವಿದ್ಯಾರ್ಥಿಗಳು ತಯಾರಿಸಿದ ಮಾದರಿಗಳನ್ನು ಮತ್ತು ಶಾಲೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ , ಶಿಕ್ಷಕರು, ಪೋಷಕರು ಮತ್ತು ಶಾಲೆಯ ಎಲ್ಲಾ ಮಕ್ಕಳು ಭಾಗವಹಿಸಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment