SUDDIKSHANA KANNADA NEWS/DAVANAGERE/DATE:11_10_2025
ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ. ಸಾರ್ವಜನಿಕ ಭೇಟಿಯ ಸಂದರ್ಭದಲ್ಲಿ ಕೆಲವರು ಕೇಳಿದ ಪ್ರಶ್ನೆಯನ್ನು ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಬೇಸರ ತಂದಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
READ ALSO THIS STORY: 150 ಕೋಟಿ ರೂ. ವಂಚನೆ, ಖಾತೆಯಲ್ಲಿ 18 ಕೋಟಿ ರೂ. ಹಣ ಹೊಂದಿದ್ದ ವಂಚಕರು: ಸೆರೆ ಸಿಕ್ಕ ಆರೋಪಿ ಹಿಸ್ಟರಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಡಿ. ಕೆ. ಶಿವಕುಮಾರ್ ಅವರು, ನನಗೆ ನನ್ನ ಗುರಿ ಗೊತ್ತಿದೆ, ನನಗೆ ಯಾವ ಆತುರವೂ ಇಲ್ಲ, ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ ಎಂದೂ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ದಾರೆ.
ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ. ರಾಜ್ಯದ ಜನರ ಸೇವೆ ಮತ್ತು ಬೆಂಗಳೂರು ನಾಗರಿಕರಿಗೆ ಉತ್ತಮ ಆಡಳಿತ ನೀಡುವುದೇ ನನ್ನ ಉದ್ದೇಶ. ನಾನು ಸಾರ್ವಜನಿಕರ ಸೇವೆಗಾಗಿಯೇ ಹಗಲು-ರಾತ್ರಿ ಶ್ರಮಿಸುತ್ತಿದ್ದೇನೆ. ಸತ್ಯವನ್ನು ತಿರುಚಿ, ದಾರಿ ತಪ್ಪಿಸುವ ವರದಿಗಳಿಂದ ದೂರವಿರುವಂತೆ ಮಾಧ್ಯಮ ಮಿತ್ರರಲ್ಲಿ ನನ್ನ ಮನವಿ ಎಂದು ಹೇಳಿದ್ದಾರೆ.