Home ಕ್ರೈಂ ನ್ಯೂಸ್ ನಾನು ಎಲ್ಲಿಯೂ ಓಡಿ ಹೋಗಿಲ್ಲ, ಕಾನೂನಿಗೆ ಬೆಲೆ ಕೊಟ್ಟು ಮನೆಯಲ್ಲೇ ಇದ್ದೆ: ಬಿಜೆಪಿ ಶಾಸಕ ಬಿ. ಪಿ. ಹರೀಶ್
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ನಾನು ಎಲ್ಲಿಯೂ ಓಡಿ ಹೋಗಿಲ್ಲ, ಕಾನೂನಿಗೆ ಬೆಲೆ ಕೊಟ್ಟು ಮನೆಯಲ್ಲೇ ಇದ್ದೆ: ಬಿಜೆಪಿ ಶಾಸಕ ಬಿ. ಪಿ. ಹರೀಶ್

Share
Share

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಭ್ರಷ್ಟಾಚಾರ, ಅವ್ಯವಹಾರ, ಕಾನೂನು ಉಲ್ಲಂಘನೆ ಪ್ರಶ್ನೆ ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ನನ್ನ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದ್ದರಿಂದ ಮನೆಯಲ್ಲಿಯೇ ಇದ್ದೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ಅಟ್ರಾಸಿಟಿ ಕೇಸ್ ದಾಖಲಾಗಿದ್ದರಿಂದ ಸಾರ್ವಜನಿಕವಾಗಿ ಓಡಾಡಬಾರದು. ಕಾನೂನಿಗೆ ಗೌರವ ಕೊಟ್ಟು ಹೊರಗಡೆ ಬಂದಿಲ್ಲ ಎಂದು ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಸ್ಪಷ್ಟನೆ ನೀಡಿದರು.

ಈ ಸುದ್ದಿಯನ್ನೂ ಓದಿ: BIG BREAKING: ದಾವಣಗೆರೆ ಸಿಂಥೆಟಿಕ್ ಡ್ರಗ್ಸ್ ಕೇಸಲ್ಲಿ ಬಂಧಿತರ ಸಂಖ್ಯೆ 11ಕ್ಕೇರಿಕೆ: ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶಿವರಾಜ್ ಬಂಧನ!

ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರ ಕಾಂಗ್ರೆಸ್ ಮುಖಂಡರು ನಾನು ಅಭಿವೃದ್ಧಿ ಮಾಡುವುದನ್ನು ಬಿಟ್ಟು ಓಡಿ ಹೋಗಿದ್ದೇನೆಂಬ ಆರೋಪ ಮಾಡಿದ್ದಾರೆ. ಇದು ಶುದ್ಧ ಸುಳ್ಳು. ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೂ ಒಂದೇ ಕಾನೂನು. ಕಾನೂನಿಗೆ ಗೌರವ ನೀಡಿ ಆಚೆ ಬಂದಿರಲಿಲ್ಲ ಎಂದು ತಿಳಿಸಿದರು.

ಕಾಡಜ್ಜಿಯ ಕೃಷಿ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮಣ್ಣು ಲೂಟಿ ಹೊಡೆಯಲಾಗಿದೆ. ನಾನು ಸ್ಥಳಕ್ಕೆ ಹೋದಾಗ ಲಾರಿಗಳು ಇದ್ದವು. ಕೆಲವು ವ್ಯಕ್ತಿಗಳು ಇದ್ದರು. ನಾನು ಕೃಷಿ ಇಲಾಖೆಗೆ ಹೋಗಿದ್ದೆ. ನನ್ನ ಜೊತೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ದಾವಣಗೆರೆ ಗ್ರಾಮಾಂತರ ಪೊಲೀಸರು ಬಂದಿದ್ದರು. ಆದರೂ ಉಸ್ತುವಾರಿ ಸಚಿವ ಚೇಲಾಗಳು ಬಂದು ಗಲಾಟೆ ಎಬ್ಬಿಸಿದರು. ನಾನು ತಡೆ ಹಿಡಿದ ಲಾರಿಗಳು, ಕಾರುಗಳಲ್ಲಿ ಬಂದಿದ್ದ ವ್ಯಕ್ತಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿಲ್ಲ. ನನ್ನ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಿದ್ದಾರೆ. ಕಾಂತರಾಜ್ ಎಂಬ ವ್ಯಕ್ತಿ ಸ್ಥಳದಲ್ಲಿಯೇ ಇರಲಿಲ್ಲ. ಉಸ್ತುವಾರಿ ಸಚಿವರ ಕುಮ್ಮಕ್ಕಿನಿಂದ ಸುಳ್ಳು ಎಫ್ ಐಆರ್ ನನ್ನ ಮೇಲೆ ದಾಖಲಾಗಿದೆ. ಇದರ ವಿರುದ್ಧ ಹೋರಾಟ ರಾಜ್ಯಮಟ್ಟದಲ್ಲಿಯೂ ನಡೆಯಲಿದೆ ಎಂದು ತಿಳಿಸಿದರು.

ಅಕ್ರಮವಾಗಿ ಮಣ್ಣು ಲೂಟಿ ಮಾಡುವವರ ವಿರುದ್ದ ಯಾವುದೇ ಕೇಸ್ ದಾಖಲಿಸಿಲ್ಲ. ಕೃಷಿ ಇಲಾಖೆಯ ಅಧಿಕಾರಿಗಳು ಎಫ್ ಐಆರ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಮಣ್ಣು ಸಾಗಾಟ ಮಾಡಲು ಬಂದವರು ಯಾರು ಎಂಬುದು ಗೊತ್ತಿಲ್ಲ. ಕೆರೆಯಂಗಳದ ಮಣ್ಣು ಸಾಗಾಟ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ದಾಖಲಿಸಿದ್ದಾರೆ. ಸಾಕ್ಷ್ಯಗಳಿದ್ದರೂ ಕ್ರಮ ಕೈಗೊಳ್ಳದ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರ ನಡೆ ಸರಿಯಲ್ಲ. ಸಚಿವರ ಭಯಕ್ಕೆ ಬಿದ್ದು ಈ ರೀತಿಯಾಗಿ ವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮುಖಂಡರಾದ ಶ್ರೀನಿವಾಸ್ ದಾಸಕರಿಯಪ್ಪ, ಮಾಜಿ ಶಾಸಕರಾದ ಎಸ್. ವಿ. ರಾಮಚಂದ್ರಪ್ಪ, ಹೆಚ್. ಪಿ. ರಾಜೇಶ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ
ಶಿವಕುಮಾರ್, ಬಿ. ಟಿ. ಸಿದ್ಧಪ್ಪ, ಪಿ. ರಾಜೇಶ್ ನಾಯ್ಕ ಮತ್ತಿತರರು ಹಾಜರಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles
ಗಣೇಶ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಮಸೀದಿ ಮುಂದೆ ಗಣೇಶ ಮೆರವಣಿಗೆ ನಿರ್ಬಂಧಿಸಿದರೆ ಠಾಣೆಗೆ ನುಗ್ಗುತ್ತೇನೆ: ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ಬೆನ್ನಲ್ಲೇ ರೌಡಿಗೆ ಜೈಲು ಗ್ಯಾರಂಟಿ ಎಂದ್ರು ಪ್ರಿಯಾಂಕ್ ಖರ್ಗೆ! ಬೆಂಗಳೂರು ಮೈಸೂರು:ಗಣೇಶೋತ್ಸವ ಮೆರವಣಿಗೆಯ ವೇಳೆ ಮಸೀದಿ ಮುಂಭಾಗ ಹಾದುಹೋಗುವ ಮಾರ್ಗ ಹಾಗೂ ಧ್ವನಿವರ್ಧಕಗಳ ಬಳಕೆಯ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ನೀಡಿದ್ದ ಎಚ್ಚರಿಕೆಯ ಹೇಳಿಕೆಗೆ ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಟಿ. ನರಸೀಪುರ ಪೊಲೀಸ್ ಇನ್ಸ್‌ಪೆಕ್ಟರ್ ಸಾರ್ವಜನಿಕ ಸಭೆಯಲ್ಲಿ ಬ್ರಿಟಿಷರ ಕಾಲದ ದರ್ಪ ಪ್ರದರ್ಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹೆಸರಿನಲ್ಲಿ ಯುವಕರು ಮತ್ತು ಸಾರ್ವಜನಿಕರನ್ನು ಬೆದರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಮಸೀದಿ ಮುಂದೆ ಯುವಕರು ನೃತ್ಯ ಮಾಡಿದರೆ ಅಥವಾ ಮೆರವಣಿಗೆ ಸಾಗಿದರೆ ತಪ್ಪೇನು?” ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಅವರು, “ಪುಂಡಾಟಿಕೆ ಮಾಡುವುದು ಮತ್ತು ಕಲ್ಲು ತೂರುವ ಕೆಲಸಗಳನ್ನು ಯಾರು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿದೆ, ಹಿಂದೂಗಳು ಎಂದಿಗೂ ಈ ರೀತಿಯ ಕೆಲಸಗಳನ್ನು ಮಾಡಿಲ್ಲ. ಮಸೀದಿಗಳಿಂದ ದಿನಕ್ಕೆ ಐದು ಬಾರಿ ಬರುವ ಧ್ವನಿವರ್ಧಕಗಳ ಕೂಗು ಹಿಂದೂಗಳ ಮನೆಗೆ ಕೇಳಿಸದಂತೆ ಮಾಡುವ ಧೈರ್ಯ ಪೊಲೀಸರಿಗಿದೆಯೇ? ಅದನ್ನು ಬಿಟ್ಟು ಹಬ್ಬ ಆಚರಿಸುವ ಹಿಂದೂ ಯುವಕರಿಗೆ ಧಮ್ಕಿ ಹಾಕುವುದು ಸರಿಯಲ್ಲ. ಟಿ. ನರಸೀಪುರ ಇನ್ಸ್‌ಪೆಕ್ಟರ್ ಇನ್ನೊಮ್ಮೆ ಈ ರೀತಿ ಬಾಲ ಅಲ್ಲಾಡಿಸಿದರೆ ಅಥವಾ ಬೆದರಿಕೆ ಹಾಕಿದರೆ ನಾನೇ ನೇರವಾಗಿ ಠಾಣೆಗೆ ನುಗ್ಗುತ್ತೇನೆ” ಎಂದು ಖಡಕ್ ಸವಾಲು ಹಾಕಿದರು. ಇತ್ತೀಚಿನ ಗಣೇಶ ವಿಸರ್ಜನೆ ಮೆರವಣಿಗೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ನಡುವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೈಸೂರಿನಲ್ಲೊಬ್ಬ ರೌಡಿ ಇದ್ದಾನೆ. ಆತನಿಗೆ ಪರಪ್ಪನ ಆಗ್ರಹಾರಕ್ಕೆ ನುಗ್ಗಿಸುತ್ತೇವೆ. ಕಾನೂನು ಕೈಗೆತ್ತಿಕೊಂಡರೆ ಸುಮ್ಮನಿರಲ್ಲ ಎಂದಿದ್ದಾರೆ. ಇದು ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಸಮರಕ್ಕೆ ಕಾರಣವಾಗಿದೆ.