ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಿಯಾಯಿತಿ ದರದಲ್ಲಿ ಬಡ ಪತ್ರಕರ್ತರಿಗೆ ನಿವೇಶನಕ್ಕೆ ಸಿಎಂ ಜೊತೆ ಚರ್ಚಿಸುವೆ: ಕೆ.ವಿ. ಪ್ರಭಾಕರ್

On: September 13, 2025 5:24 PM
Follow Us:
ರಿಯಾಯಿತಿ
---Advertisement---

SUDDIKSHANA KANNADA NEWS/ DAVANAGERE/DATE:13_09_2025

ದಾವಣಗೆರೆ: ತೀರಾ ಅಗತ್ಯ ಇರುವ ಬಡ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ನಿವೇಶನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌
ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

READ ALSO THIS STORY: ದೇಶಕ್ಕೆ ಅನ್ನ ಕೊಡುವ ರೈತರನ್ನು ಬದುಕಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ: ಡಿ.ಕೆ.ಶಿವಕುಮಾರ್

ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾನೂ ಕೂಡ ಗ್ರಾಮೀಣ ಭಾಗದಿಂದಲೇ ಪತ್ರಕರ್ತ ವೃತ್ತಿ ಆರಂಭಿಸಿರುವುದರಿಂದ ಪತ್ರಕರ್ತ ಸಮುದಾಯದ ಸಮಸ್ಯೆ, ಸಂಕಷ್ಟಗಳನ್ನು ಅನುಭವಿಸಿದ್ದೇನೆ. ಹೀಗಾಗಿ ಪತ್ರಕರ್ತ ಸಮುದಾಯದ ಎಲ್ಲಾ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರ ಪಾಸ್ ಗೆ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸುವ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪತ್ರಕರ್ತರ ಗಿಲ್ಡ್ ಗೆ ಸ್ವಂತ ನಿವೇಶನ ಮತ್ತು ಕಟ್ಟಡ ನಿರ್ಮಿಸಲು ಅಗತ್ಯ ಸಹಕಾರ ನೀಡುವಂತೆ ಗಿಲ್ಡ್ ಪದಾಧಿಕಾರಿಗಳು ಮುಂದಿಟ್ಟ ಬೇಡಿಕೆ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಬಡದಾಳ್, ಮಂಜುನಾಥ್ ಗೌರಕ್ಕಳವರ್, ಹಿರಿಯ ಪತ್ರಕರ್ತರಾದ ಮಲ್ಲಿಕಾರ್ಜುನ ಕಬ್ಬೂರು, ಚಂದ್ರಣ್ಣ, ಸುರೇಶ್ ಕುಣಿಬೆಳಕೆರೆ ಸೇರಿದಂತೆ ಹಿರಿಯ ಮತ್ತು ಕಿರಿಯ ಪತ್ರಕರ್ತರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment