ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ರಾವಲ್ಪಿಂಡಿ ಚಿಕನ್, ಟಿಕ್ಕಾ ಮಸಾಲ, ಬಹವಾಲ್ಪುರ್ ನಾನ್: ಪಾಕ್ ಕಾಲೆಳೆದ ಐಎಎಫ್ ಭೋಜನದ ಮೆನು!

On: October 9, 2025 2:06 PM
Follow Us:
ರಾವಲ್ಪಿಂಡಿ
---Advertisement---

SUDDIKSHANA KANNADA NEWS/DAVANAGERE/DATE:09_10_2025

ನವದೆಹಲಿ: ರಾವಲ್ಪಿಂಡಿ ಚಿಕನ್, ಟಿಕ್ಕಾ ಮಸಾಲ, ಬಹವಾಲ್ಪುರ್ ನಾನ್. ಇದು ಐಎಎಫ್ ಮಾಡಿರುವ ಊಟದ ಮೆನು. ಪಾಕಿಸ್ತಾನದ ವಿರುದ್ಧ ಯಶಸ್ವಿ ಕಾರ್ಯಾಚರಣೆ ಬಳಿಕ ಐಎಎಫ್ ಈ ರೀತಿಯ ಮೆನು ಸಿದ್ಧಪಡಿಸಿದ್ದು ಸಖತ್ ಗಮನ ಸೆಳೆದಿದೆ.

READ ALSO THIS STORY: ಭಾರತದ ಮುಸ್ಲಿಂ ವಿದ್ಯಾವಂತ ಯುವತಿಯರು, ಮಹಿಳೆಯರೇ ಟಾರ್ಗೆಟ್: ಭಯೋತ್ಪಾದನೆಗೆ ಆಕರ್ಷಿಸಲು ಜೈಶ್-ಎ-ಮೊಹಮ್ಮದ್ ಹೂಡಿದೆ ಕುತಂತ್ರ!

ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕ್ ವಾಯುನೆಲೆ ಸೇರಿದಂತೆ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತದ ದಾಳಿಯು ಮರ್ಮಾಘಾತ ಕೊಟ್ಟಿತ್ತು. ವಾಯುಪಡೆಯ ಯಶಸ್ವಿ ದಾಳಿಯ ಬಗ್ಗೆ ಪಾಕಿಸ್ತಾನ ಟೀಕಿಸುವ ಮೆನು ಗಮನ ಸೆಳೆಯುತ್ತಿದೆ.

ಭೋಲಾರಿ ವಾಯುನೆಲೆಯ ಮೇಲೆ ದಾಳಿ ಮಾಡುವುದರಿಂದ ಹಿಡಿದು ಮುರಿಡ್ಕೆಯಲ್ಲಿ ಲಷ್ಕರ್ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡುವವರೆಗೆ ಇಸ್ಲಾಮಾಬಾದ್‌ಗೆ ಉಂಟಾದ ಹಾನಿಯನ್ನು ಮೆನುವಿನಲ್ಲಿ ಅಣಕಿಸಲಾಗಿದೆ.

ಭಾರತೀಯ ವಾಯುಪಡೆ ದಿನದಂದು ಬಡಿಸುವ ಮೆನುವಿನಲ್ಲಿ ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲ, ಭೋಲಾರಿ ಪನೀರ್ ಮೇಥಿ ಮಲೈ ಮತ್ತು ಬಾಲಕೋಟ್ ತಿರಮಿಸು ಬರೆಸಲಾಗಿದೆ.

93 ನೇ ವಾಯುಪಡೆ ದಿನದ ಒಂದು ದಿನದ ನಂತರ, ಹಲವಾರು ಸೇನಾ ನಿವೃತ್ತರು ಮತ್ತು ಪತ್ರಕರ್ತರು ಎಕ್ಸ್ ನಲ್ಲಿ ಮೆನುವನ್ನು ಹಂಚಿಕೊಂಡಿದ್ದು, ಇದು ಈಗ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಚಿತ್ರದ ಸತ್ಯಾಸತ್ಯತೆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಬಹವಲ್ಪುರ್ ನಾನ್ ಮತ್ತು ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲವನ್ನು ಮುಖ್ಯ ಖಾದ್ಯವಾಗಿ ನೀಡಲಾಗಿದ್ದರೆ, ಭಾರತೀಯ ವಾಯುಪಡೆಯು ಪಾಕಿಸ್ತಾನದ ಬಾಲಕೋಟ್, ಮುಜಫರಾಬಾದ್ ಮತ್ತು ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಶಿಬಿರಗಳು ಮತ್ತು ತರಬೇತಿ ಕೇಂದ್ರಗಳ ಮೇಲೆ ನಡೆಸಿದ ದಾಳಿಯನ್ನು ಸಿಹಿತಿಂಡಿಗಳಾಗಿ ನೀಡಲಾಯಿತು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment