SUDDIKSHANA KANNADA NEWS/ DAVANAGERE/DATE:23_09_2025
ದಾವಣಗೆರೆ: ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ವಿತರಣೆ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಟೂಲ್ಕಿಟ್ ವಿತರಣೆಗಾಗಿ ಸಾರ್ವಜನಿಕರಿಂದ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿರುತ್ತದೆ.
READ ALSO THIS STORY: “ಧರ್ಮದ ಹೆಸರಿನಲ್ಲಿ ಬೆಂಕಿ ಹಚ್ಚುವವರ ಬಗ್ಗೆ ಹುಷಾರಾಗಿರಿ”: ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ
ಆದರೆ ಆಯ್ಕೆ ಮಾಡಿಸಿಕೊಡುತ್ತೇವೆ ಎಂದು ಯಾರೋ ಅಪರಿಚಿತ ವ್ಯಕ್ತಿಗಳು ಇಲಾಖೆಯ ಹೆಸರು ತಿಳಿಸಿ ಸ್ಕ್ಯಾನರ್ ಮೂಲಕ ಹಣ ಪಾವತಿ ಮಾಡಿಸಿಕೊಳ್ಳುತ್ತಿದ್ದು ಪಾವತಿ ಮಾಡಿರುವ ಅರ್ಜಿದಾರರೊಬ್ಬರಿಂದ ಇಲಾಖೆ ಗಮನಕ್ಕೆ ಬಂದಿರುತ್ತದೆ.
ಇಲಾಖೆಯಿಂದ ಅರ್ಜಿಹಾಕಿದ ಫಲಾನುಭವಿಗಳಿಗೆ ಯಾವುದೇ ಕರೆ ಮಾಡುವುದಿದಲ್ಲ, ಅನಾಮಧೇಯ ಕರೆಗಳು ಅರ್ಜಿದಾರರಿಗೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ ಹತ್ತಿರ ಪೊಲೀಸ್ ಠಾಣೆಗೆ ದೂರು ನೀಡಬಹುದು ಎಂದು ಗ್ರಾಮಾಂತರ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾರೆ.