ದಾವಣಗೆರೆ: ರೈತರು ಹೆಚ್ಚಾಗಿ ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಸುವ ಮೂಲಕ ಇಳುವರಿ ಹೆಚ್ಚಿಸುವುದರ ಜೊತೆಗೆ ಬೆಳೆಗಳಿಗೆ ಕಾಡುವ ರೋಗ, ಕೀಟಬಾಧೆ ಕೊನೆಗಾಣಿಸಿ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
READ ALSO THIS STORY: BIG EXCLUSIVE: ಮಾಜಿ ಪ್ರಧಾನಿ ಮೊಮ್ಮಗ ಪ್ರಜ್ವಲ್ ರೇವಣ್ಣ ಅತ್ಯಾಚಾರ ಕೇಸ್ ನಲ್ಲಿ ದೋಷಿ: ಮಾಜಿ ಸಂಸದನಿಗೆ ಶಾಕ್!
ದಾವಣಗೆರೆ ತಾಲ್ಲೂಕಿನ ತುಂಬಿಗೆರೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕೃಷಿ ಇಲಾಖೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತುಂಬಿಗೆರೆ ಹಾಗೂ ಇಫೊಕೀ ಸಂಸ್ಥೆ ಹಾಗೂ ಹೆಬ್ಬಾಳು ಮಠದ
ಶ್ರೀ ಶ್ರೀ ಶ್ರೀ ಮಹಾಂತರುದ್ರ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಲಾದ ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಡ್ರೋನ್ ಮುಖಾಂತರ ಸಿಂಪರಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾನೋ ಯೂರಿಯಾ ಬೆಳೆಗಳಿಗೆ ಸಿಂಪರಣೆ ಮಾಡಿದ ನಾಲ್ಕು ತಾಸುಗಳಲ್ಲಿ ಹೀರಿಕೊಳ್ಳುವ ಸಾಮಥ್ರ್ಯವಿದ್ದು, ಶೇಕಡ 80ರಷ್ಟು ಬೆಳೆಗಳಿಗೆ ಸಿಗುತ್ತದೆ. ರೈತರು ಹೆಚ್ಚಾಗಿ ಹರಳು ರೂಪದ ಯೂರಿಯಾವನ್ನು ಬೆಳೆಗಳಿಗೆ ಹಾಕುವುದರಿಂದ ರೋಗ, ಕೀಟಬಾಧೆ ಹೆಚ್ಚಾಗುತ್ತದೆ. ಆದುದರಿಂದ ರೈತರು ನ್ಯಾನೋ ಯೂರಿಯಾ ಬಳಕೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಶ್ರೀ ಮಹಾಂತ ರುದ್ರ ಸ್ವಾಮಿಗಳವರು ಮಾತನಾಡಿ, ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯವನ್ನು ಮಠದ ಹದಿನಾಲ್ಕು ಎಕರೆ ಮೆಕ್ಕೆಜೋಳ ಬೆಳೆಗೆ ಈಗಾಗಲೇ ಸಿಂಪರಣೆ ಮಾಡಲಾಗಿದ್ದು, ಬೆಳೆಯು ಉತ್ಕ್ರಷ್ಟವಾಗಿ ಬೆಳೆದು ನಿಂತಿದೆ. ಆದುದರಿಂದ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಮೆಕ್ಕೆಜೋಳ ಬೆಳೆಯಲ್ಲಿ ಮುಳ್ಳುಸಜ್ಜೆ ಹೆಚ್ಚಾಗಿದ್ದು, ರಾಗಿ, ತೊಗರಿ ಹಾಗೂ ಇತರೆ ಬೆಳೆ ಪರಿವರ್ತನೆ ಮಾಡಿ ಬೆಳೆಗಳನ್ನು ಬೆಳೆಯಬೇಕು. ಆಗ ಇಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ತಿಳಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಿಯಾವುಲ್ಲಾ ಮಾತನಾಡಿ, ಅತಿ ಹೆಚ್ಚಾಗಿ ಹರಳು ರೂಪದ ಯೂರಿಯಾ ಬೆಳೆಗಳಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹಾಳಾಗಿ, ಜನಸಾಮಾನ್ಯರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿರುವುದು ಹಾಗೂ ಕ್ಯಾನ್ಸರ್ ಅಂತಹ ಮಾರಕ ರೋಗಗಳೂ ಕೂಡ ಉಲ್ಬಣಗೊಳ್ಳುತ್ತಿವೆ. ಜಾನುವಾರು, ಕುಡಿಯುವ ನೀರಿನ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದುದರಿಂದ ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಬಳಕೆ ಮಾಡುಬೇಕು ಎಂದು ತಿಳಿಸಿದರು.
ಈ ವೇಳೆ ತುಂಬಿಗೆರೆ ಗ್ರಾಮದ ರೈತ ಎಸ್. ಎಸ್. ಕೆಂಚವೀರಪ್ಪ ಇವರ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳದ ಬೆಳೆಗೆ ಹರಳು ರೂಪದ ಯೂರಿಯಾ ಬದಲಾಗಿ ನ್ಯಾನೋ ಯೂರಿಯಾ ಡ್ರೋನ್ ಮುಖಾಂತರ ಸಿಂಪರಣೆ ಆಂದೋಲನ ಪ್ರಾರಂಭಿಸಿ, ಡ್ರೋನ್ ಮುಖಾಂತರ ಮೆಕ್ಕೆಜೋಳ ಬೆಳೆಗೆ ನ್ಯಾನೋ ಯೂರಿಯಾ ಸಿಂಪರಣೆ ಮಾಡುವ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಉಪ ಕೃಷಿ ನಿರ್ದೇಶಕರು ಎಸ್.ಅಶೋಕ್, ಸಹಾಯಕ ಕೃಷಿ ನಿರ್ದೇಶಕ ಡಿ.ಎಂ. ಶ್ರೀಧರಮೂರ್ತಿ, ತಹಶೀಲ್ದಾರ್ ಅಶ್ವಥ್, ಕೃಷಿ ಅಧಿಕಾರಿ ಆರ್.ಶ್ರೀನಿವಾಸ್, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ಶಿವಣ್ಣ, ಕೃಷಿಕ ಸಮಾಜದ ಸದಸ್ಯರಾದ ಹೊನ್ನೂರು ಮುನಿಯಪ್ಪ, ನಾಗರಾಜ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಪಿ. ನುಲಿಯಚಂದಯ್ಯ, ಉಪಾಧ್ಯಕ್ಷ ಬಿ.ವಿ.ಶೀಲಾ ಹಾಗೂ ಹೆಚ್.ಬಿ. ಭೂಮೇಶ್ವರಪ್ಪ, ಅಣಜಿ ಚಂದ್ರಣ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ವಿ. ರೇವಣಸಿದ್ದಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಎಲ್ಲಾ ಸದಸ್ಯರುಗಳು, ರೈತರು ಹಾಗೂ ಮಹಿಳೆಯರು ಭಾಗವಹಿಸಿದ್ದರು.