SUDDIKSHANA KANNADA NEWS/ DAVANAGERE/ DATE-06-05-2025
ನವದೆಹಲಿ: ಭಾರತ ಮತ್ತು ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದು, ಶತ್ರುರಾಷ್ಟ್ರ ಪಾಕಿಸ್ತಾನಕ್ಕೆ ಭಯ ಶುರುವಾಗಿದೆ.
ಎರಡೂ ದೇಶಗಳು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಭಾರತ ಮತ್ತು ಯುಕೆ ಎರಡೂ ದೇಶಗಳ ನಡುವೆ ಬಹುನಿರೀಕ್ಷಿತ ಮತ್ತು ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಯುಕೆ ಪ್ರತಿರೂಪ ಕೀರ್ ಸ್ಟಾರ್ಮರ್ ನಡುವಿನ ದೂರವಾಣಿ ಸಂಭಾಷಣೆಯ ಸಹಿ ಬಿದ್ದಿದೆ.
ಈ ಒಪ್ಪಂದವನ್ನು “ಐತಿಹಾಸಿಕ ಮೈಲಿಗಲ್ಲು” ಎಂದು ಕರೆದ ಪ್ರಧಾನಿ ಮೋದಿ, ಈ ಕ್ರಮವು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುತ್ತದೆ ಮತ್ತು ನಮ್ಮ ಎರಡೂ ಆರ್ಥಿಕತೆಗಳಲ್ಲಿ ವ್ಯಾಪಾರ, ಹೂಡಿಕೆ, ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಯನ್ನು ವೇಗಗೊಳಿಸುತ್ತದೆ ಎಂದು ಹೇಳಿದರು.