ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಕೋರ್ಟ್ ಗೆ ಹಾಜರಾಗದೇ ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಮನೆಕಳ್ಳರ ಬಂಧನ: 10,32,000 ರೂ ಮೊತ್ತದ ಸ್ವತ್ತು ವಶ!

On: March 10, 2025 7:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:10-03-2025

ದಾವಣಗೆರೆ: ಅಂತರ್ ಜಿಲ್ಲಾ ಇಬ್ಬರು ಮನೆ ಕಳ್ಳರನ್ನು ಬಂಧಿಸಿರುವ ಹದಡಿ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, 10,32,000 ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಬ್ಯಾಡಗಿ ಗ್ರಾಮದ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಮುಬಾರಕ್ (22), ಟೈಲ್ಸ್ ಕೆಲಸ ಮಾಡುತ್ತಿದ್ದ ಸಾದತ್ ಅಲಿಯಾಸ್ ಸುಳ್ಳ ಸಾದತ್ ಮೊಹಮ್ಮದ್ (32) ಬಂಧಿತ
ಆರೋಪಿಗಳು.

ದಾವಣಗೆರೆ ಜಿಲ್ಲೆಯ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುವಾಡ ಗ್ರಾಮದ ಶಿಕ್ಷಕ ಬಿ. ಟಿ. ಮಧು ಅವರು ಮನೆ ಕಳ್ಳತನದ ಬಗ್ಗೆ ಹದಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದಾವಣಗೆರೆಗ್ರಾಮಾಂತರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಮತ್ತು ಮಾಯಕೊಂಡ ವೃತ್ತ ಕಛೇರಿಯ ಸಿಪಿಐ ಡಿ. ನಾಗರಾಜ್ ಮಾರ್ಗದರ್ಶನದಲ್ಲಿ ಹದಡಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿರವರ
ನೇತೃತ್ವದಲ್ಲಿ, ಅಪರಾಧ ವಿಭಾಗದ ಪಿಎಸ್ಐ ಶಕುಂತಲ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.

ಆರೋಪಿತರಿಂದ ಒಟ್ಟು 5 ಪ್ರಕರಣಗಳಲ್ಲಿನ ಸ್ವತ್ತು ಜಫ್ತಿ ಮಾಡಿದ್ದು ಆರೋಪಿತರಿಗೆ ನ್ಯಾಯಾಂಗ ಬಂದನಕ್ಕೆ ಒಪ್ಪಿಸಲಾಗಿದೆ.

ಹದಡಿ ಪೊಲೀಸ್ ಠಾಣೆಯ 2 ಪ್ರಕರಣಗಳು, ಬಸವಪಟ್ಟಣ ಪೊಲೀಸ್ ಠಾಣೆಯ 2 ಪ್ರಕರಣಗಳಲ್ಲಿ ಒಟ್ಟು 7,20,000- ರೂ. ಬೆಲೆಯ 91 ಗ್ರಾಂ ತೂಕದ ಬಂಗಾರದ ಆಭರಣಗಳು, 4000 ರೂ ಬೆಲೆಯ 50 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 58,000 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ ಬುಲೆಟ್ ಬೈಕ್‌ನ್ನು (ಅಂದಾಜು ಮೊತ್ತ 1,50,000/- ರೂ.) ಹಾಗೂ ಆರೋಪಿತರ ಕಳ್ಳತನ ಮಾಡಲು ಬಳಸುತ್ತಿದ್ದ 1,00,000 ರೂ. ಬೆಲೆಯ ಸುಜಿಕಿ ಆಕ್ಸಸ್ 125ಸಿಸಿ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿತರ ಹಿನ್ನೆಲೆ:

ಆರೋಪಿತರ ವಿರುದ್ದ ಹರಿಹರ ನಗರ ಠಾಣಾ ವಿವಿಧ ಪ್ರಕರಣಗಳಲ್ಲಿ ಆರೋಪಿತರು.

ದಾವಣಗೆರೆಯ ಕೆ.ಟಿ.ಜೆ ನಗರದಲ್ಲಿ, ಚಿತ್ರದುರ್ಗದ ಹೊಳಲ್ಕೆರೆ, ಭರಮಸಾಗರ, ಹಾವೇರಿಯ ಗುತ್ತಲ, ಬ್ಯಾಡಗಿ, ಹಾವೇರಿ ಶಹರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಸುಮಾರು 15 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿತರು ಭಾಗಿಯಾಗಿದ್ದು ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತವೆ.

ಆರೋಪಿತರು ಈಗ್ಗೆ ಸುಮಾರು 5 ತಿಂಗಳ ಹಿಂದೆ ಹಾವೇರಿ ಜಿಲ್ಲಾ ಕಾರಾಗೃಹ ದಿಂದ ಬಿಡುಗಡೆಯಾಗಿದ್ದು, ಘನ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುತ್ತಾರೆ.

ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಮೇಲ್ಕಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಾದ ಪ್ರಕಾಶ್, ಕರಿಬಸಪ್ಪ ಕೆ.ಆರ್, ಮಾರುತಿ, ಮಂಜುನಾಥ, ಕರಿಬಸಪ್ಪ, ನಾಗರಾಜ್, ಲೋಕಾನಾಯ್ಕ, ಅರುಣಕುಮಾರ,
ಶ್ರೀನಿವಾಸ, ಸಂತೋಷಕುಮಾರ, ತಿಮ್ಮಪ್ಪ, ಚನ್ನಬಸಪ್ಪ, ಜಯಪ್ರಕಾಶ, ನೀಲಪ್ಪ, ಕಣ್ಣಪ್ಪ, ಕರಿಬಸಪ್ಪ, ಜಗದೀಶ ಅವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಅವರು ಅಭಿನಂದಿಸಿದ್ದಾರೆ.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment