SUDDIKSHANA KANNADA NEWS/ DAVANAGERE/ DATE-06-06-2025
ಶಿವಮೊಗ್ಗ: ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ.
ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್) ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮಗಳ ಪ್ರಾಯೋಗಿಕ ಮತ್ತು ಥಿಯರಿ,ಕಲಾ ಇತಿಹಾಸದ ಥಿಯರಿ ಬೋಧನೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪೋಸ್ಟ್ ಡಿಪ್ಲೋಮದಲ್ಲಿ (ಪಿ.ಜಿ.ಡಿಪ್ಲೋಮಾ) ಕನಿಷ್ಠ 55%ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕನ್ನಡ, ಇಂಗ್ಲೀಷ್, ಹಿಂದಿ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಆಯಾ ಭಾಷಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಸೈಬರ್ ಸೆಕ್ಯೂರಿಟಿ/ಆರ್ಟಿಫಿಶಲ್ ಇಂಟಲಿಜೆಟ್ಸ್ ವಿಷಯಕ್ಕೆ ಸಂಬಂಧಿಸಿದಂತೆ ಎಂ.ಎಸ್ಸಿ(ಐಟಿ) ಸ್ನಾತಕೋತ್ತರ ಪದವಿ ಪಡೆದಿರಬೇಕು.
ಆಸಕ್ತರು ಕರ್ನಾಟಕ ಸರ್ಕಾರದ ಅಂತರ್ಜಾಲ www.mysore.nic.in ಮತ್ತು www.cavamysore.karnataka.gov.in ದ ಮೂಲಕ ಮಾಹಿತಿ ಪಡೆದು ಅರ್ಜಿಯನ್ನು ಜೂ.16ರೊಳಗಾಗಿ ಸಲ್ಲಿಸುವುದು. ಜೂ 26 ರಂದು 11.00ಕ್ಕೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಿ ತರಗತಿಗಳು ಅನ್ವಯವಾಗುವಂತೆ ಕಾರ್ಯ ನಿರ್ವಹಿಸಲು ತಿಳಿಸಲಾಗುವುದು ಎಂದು ಮೈಸೂರು ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಹಾಗೂ ದೂ.ಸಂ.: 0821-2438931 ನ್ನು ಸಂಪರ್ಕಿಸುವುದು.