ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Davanagere: ತಂತ್ರಜ್ಞಾನದ ವೇಗಕ್ಕೆ ತಕ್ಕಂತೆ ಪತ್ರಕರ್ತರಿಗೆ ತರಬೇತಿ ಅಗತ್ಯ: ಕೆ. ವಿ. ಪ್ರಭಾಕರ್ ಪ್ರತಿಪಾದನೆ

On: August 27, 2023 10:00 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:27-08-2023

ದಾವಣಗೆರೆ (Davanagere):ತಂತ್ರಜ್ಞಾನದ ಬೆಳವಣಿಗೆ ಹಲವು ಸಮಸ್ಯೆಗಳನ್ನು ಮುಂದಿಡುತ್ತಿದೆ. ಸಮರ್ಥವಾಗಿ ಸವಾಲು ಎದುರಿಸಲು ಪತ್ರಕರ್ತರಿಗೆ ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದಲ್ಲಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಆಶ್ರಯದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮವೂ ತಂತ್ರಜ್ಞಾನ ಮತ್ತು ಬದಲಾದ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪ, ವೇಗ ಬದಲಾಯಿಸಿಕೊಳ್ಳುತ್ತಿದೆ. ಹಿಂದೆಲ್ಲಾ ಬರೆಯುವವರೊಬ್ಬರು, ಪ್ರೂಫ್ ನೋಡುವುದಕ್ಕೆ ಹಲವರು ಇರುತ್ತಿದ್ದರು. ಈಗ ಪ್ರೂಫ್ ರೀಡರ್ ಹುದ್ದೆಯೇ ಇಲ್ಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುದ್ದೆಗಳು ಅಸ್ತಿತ್ವ ಕಳೆದುಕೊಳ್ಳಬಹುದು. ಎಲ್ಲವನ್ನೂ ಸಂಪಾದಕರಿಂದ ವರದಿಗಾರರು ಮಾಡುವ ಕೆಲಸಗಳನ್ನೆಲ್ಲವನ್ನೂ ಮುಂದಿನ ದಿನಗಳಲ್ಲಿ ಒಬ್ಬರೇ ಮಾಡಬೇಕಾಗಬಹುದು. ಇಂತಹ ಕೌಶಲ್ಯ ಪ್ರತಿಭೆಗಳನ್ನು ಸುದ್ದಿ ಸಂಸ್ಥೆಗಳು ಅರಸುತ್ತಿವೆ. ಹೀಗಾಗಿ ಇದಕ್ಕೆ ತಕ್ಕಂತೆ ಪತ್ರಿಕೋದ್ಯಮ ಮತ್ತು ಯುವ ಪೀಳಿಗೆಯ ಪತ್ರಕರ್ತರು ಸಜ್ಜಾಗಬೇಕಿದೆ ಎಂದು ಸಲಹೆ ನೀಡಿದರು.

ಈ ಸುದ್ದಿಯನ್ನೂ ಓದಿ: 

Inquiry: ಬಿಜೆಪಿ ಭ್ರಷ್ಟಾಚಾರ ಆರೋಪ ತನಿಖೆಗೆ ರಾಜ್ಯ ಸರ್ಕಾರ ಅಸ್ತು: ಕೋವಿಡ್ ತನಿಖೆಗೆ ನ್ಯಾ. ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ

ಸಜ್ಜುಗೊಳ್ಳಲು ಬೇಕಾದ ತರಬೇತಿಯನ್ನು ಪತ್ರಕರ್ತರ ಕೂಟಗಳು, ಸಂಘಗಳು ನೀಡಬೇಕಾಗುತ್ತದೆ. ತಂತ್ರಜ್ಞಾನದ ವೇಗಕ್ಕೆ ಪತ್ರಿಕೋದ್ಯಮ ಸಿಲುಕಿದ್ದರೂ ಪತ್ರಿಕಾ ವೃತ್ತಿಯ ಪ್ರಾಥಮಿಕ ಮತ್ತು ಮೂಲಭೂತ ಕಾಳಜಿ ಅದೇ ಇದೆ. ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ರಕ್ಷಣೆಯ ಕಾಳಜಿ ಮತ್ತು ಜವಾಬ್ದಾರಿ ಈಗಲೂ ಪತ್ರಕರ್ತರ ಮೂಲಭೂತ ಕರ್ತವ್ಯವೇ ಆಗಿದೆ ಎಂದರು.

ವಿರಕ್ತ ಮಠದ ಬಸವ ಪ್ರಭು ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು‌ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ ವಹಿಸಿದ್ದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ
ಜಿಲ್ಲಾಧ್ಯಕ್ಷ ಎ .ಎಂ.ಮಂಜುನಾಥ್, ದಾವಣಗೆರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಶಿವಕುಮಾರ್ ಕಣಸೋಗಿ, ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್, ವಾರ್ತಾಧಿಕಾರಿ ಧನಂಜಯಪ್ಪ, ವರದಿಗಾರರ ಕೂಟದ ಪ್ರಧಾನ ಕಾರ್ಯದರ್ಶಿ ವರದರಾಜ್, ಖಜಾಂಚಿ ಮಧು ನಾಗರಾಜ್ ಕುಂದುವಾಡ ಮತ್ತಿತರರು ಹಾಜರಿದ್ದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment