ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: ಕಣುಮಾ @ ಸಂತೋಷ್ ಹತ್ಯೆ: ಮತ್ತೆ ಹತ್ತು ಆರೋಪಿಗಳ ಅರೆಸ್ಟ್, ಬಂಧಿತರ ಸಂಖ್ಯೆ 20ಕ್ಕೇರಿಕೆ!

On: May 13, 2025 2:48 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-13-05-2025

ದಾವಣಗೆರೆ: ನಗರದ ಹದಡಿ ರಸ್ತೆಯ ಕ್ಲಬ್ ನಲ್ಲಿ ರೌಡಿಶೀಟರ್ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಪೊಲೀಸರು ಹತ್ತು ಆರೋಪಿಗಳನ್ನು ಬಂಧಿಸಿದ್ದರು. ಈಗ ಮತ್ತೆ ಇನ್ನೂ
ಹತ್ತು ಆರೋಪಿಗಳ ಸೆರೆ ಹಿಡಿದಿದ್ದು, ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ರೌಡಿಶೀಟರ್ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಮಾತ್ರವಲ್ಲ, ಆರೋಪಿಗಳು ಕೊಂದ ಬಳಿ ಉಘೇ ಉಘೇ ಎಂದು ಕೂಗುತ್ತಾ ಹೋಗಿದ್ದರು.

ಈ ಪ್ರಕರಣವು ದಾವಣಗೆರ ಜನರನ್ನು ಬೆಚ್ಚಿ ಬೀಳಿಸಿತ್ತು. ಹತ್ಯೆ ಮಾಡುವಾಗಿನ ವಿಡಿಯೋಗಳು ವೈರಲ್ ಆಗಿದ್ದವು. ಕೊಚ್ಚಿ ಕೊಲೆ ಮಾಡುವ ವಿಡಿಯೋಗಳು ಹರಿದಾಡಿದ್ದವು. ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಹತ್ಯೆ ಮಾಡಿದ್ದ ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದರು. ಆ ಬಳಿಕ ಹೊಳಲ್ಕೆರೆ ಪೊಲೀಸರು ದಾವಣಗೆರೆ ಪೊಲೀಸರಿಗೆ ಹಸ್ತಾಂತರಿಸಿದ್ದರು. ತನಿಖೆ ಮುಂದುವರಿಸಿದ ಪೊಲೀಸರು ಇನ್ನೂ ಹತ್ತು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಿಚಾರಣೆ ಮುಂದುವರಿದಿದೆ.

ಆರೋಪಿಗಳ ವಿವರ:

ದಾವಣಗೆರೆಯ ಆರ್ ಎಂ ಸಿ ರಸ್ತೆಯ ಭಾರತ್ ಕಾಲೋನಿ ನಿವಾಸಿಯಾದ ಟೈಲ್ಸ್ ಕೆಲಸ ಮಾಡುತ್ತಿದ್ದ ಸಂತೋಷ (28), ಭಾರತ್ ಕಾಲೋನಿಯ ಟೈಲ್ಸ್ ಕೆಲಸ ಮಾಡುತ್ತಿದ್ದ ಕಾರ್ತಿಕ್ (29), ದಾವಣಗೆರೆ ನಗರದ ಬಾಬು ಜಗಜೀವನ್
ರಾಮ್ ನಗರದ ಬೂದಾಳ್ ರಸ್ತೆಯ ವಾಸಿಯಾದ ಹಮಾಲಿ ಕೆಲಸ ಮಾಡುತ್ತಿದ್ದ ಪ್ರಭು (30), ನವೀನ್ ಅಲಿಯಾಸ್ ಬಾಕ್ರಿ (25). ರಾಜ ಅಲಿಯಾಸ್ ತಾರಕ್ (25), ಹರಳಯ್ಯನಗರದ ಹಳೇಚಿಕ್ಕನಹಳ್ಳಿ ವಾಸಿಯೂ ಆದ ಪೇಟಿಂಗ್
ಕೆಲಸ ಮಾಡುತ್ತಿದ್ದ ನವೀನ್ @ ಸೈಲೆಂಟ್ ನವೀನ್ (20), ಭಾರತ್ ಕಾಲೋನಿ ನಿವಾಸಿ ಮಾರುತಿ (25), ಭಾರತ್ ಕಾಲೋನಿಯ ಟೈಲ್ಸ್ ಕೆಲಸ ಮಾಡುತ್ತಿದ್ದ ಬಸವರಾಜ್ ಅಲಿಯಾಸ್ ಪಿಂಕಿ (20), ಆವರಗೆರೆಯ ಪ್ರಥಮ ವರ್ಷದ ಬಿ. ಕಾಂ.
ವಿದ್ಯಾರ್ಥಿ ಜಯಸೂರ್ಯ ಅಲಿಯಾಸ್ ಪಿ. ಟಿ. (20), ಆಟೋ ಡ್ರೈವರ್ ಭರತ್ ಅಲಿಯಾಸ್ ಸ್ಲಮ್ (26) ಆರೋಪಿಗಳಾಗಿದ್ದರು.

ಕಣುಮಾ ಪತ್ನಿ ಯಾರ ಮೇಲೆ ಆರೋಪಿಸಿದ್ದರು?

ವಿದ್ಯಾನಗರ ಪೊಲೀಸ್ ಠಾಣೆಗೆ ಕಣುಮಾ ಅಲಿಯಾಸ್ ಸಂತೋಷ್ ಕುಮಾರ್ ಪತ್ನಿ ನೀಡಿದ್ದ ದೂರಿನಲ್ಲಿ 12 ಮತ್ತು ಇತರೆ ಆರೋಪಿಗಳ ವಿರುದ್ಧ ಕೊಲೆ ಮಾಡಿದ ಆರೋಪ ಮಾಡಲಾಗಿತ್ತು. ಗುಂಡಪ್ಪ, ಕಾರ್ತಿಕ್ ಭಾರತ್ ಕಾಲೋನಿ, ನವೀನ್ ಬೂದಾಳ್ ರಸ್ತೆ, ಖಾರದ ಪುಡಿ ಮಂಜನ ತಮ್ಮ ನವೀನ್, ಚಾವಳಿ ಸಂತು, ಬಸವರಾಜ್ ಅಲಿಯಾಸ್ ಬಸ್ಯ, ಹನುಮಂತ, ಗಡ್ಡ ವಿಜಿ, ಚಿಕ್ಕನಹಳ್ಳಿ ಶಿವು, ಕಡ್ಡಿ ರಘು, ಪ್ರಶಾಂತ್ ಅಲಿಯಾಸ್ ಪಚ್ಚಿ, 60 ಅಡಿ ರೋಡ್ ಗಣಿ ಮತ್ತು ಇತರರು ಸೇರಿ ನನ್ನ ಪತಿಯನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಒಟ್ಟಾರೆ ದಾವಣಗೆರೆ ಪೊಲೀಸರು ಈ ಪ್ರಕರಣ ಸಂಬಂಧ ಮತ್ತೆ ಹತ್ತು ಮಂದಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 20ಕ್ಕೆ ಏರಿದ್ದು, ಆರೋಪಿಗಳಿಂದ ಕೊಲೆಗೆ ಕಾರಣವೇನು ಎಂಬ ಕುರಿತಂತೆ ಬಾಯಿಬಿಡಿಸುತ್ತಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment