Home ಕ್ರೈಂ ನ್ಯೂಸ್ ಅಕ್ರಮ ಮರಳು ದಂಧೆಗೆ ಖಾಕಿ ಕಾವಲು: ಧಂಧೆಕೋರರಿಂದ ಹಣ ಪಡೆದವರಿಗೈೆತೆ ಮಾರಿಹಬ್ಬ:  ‘ಗೂಂಡಾ ಕಾಯ್ದೆ’ ಅಸ್ತ್ರ ಪ್ರಯೋಗಕ್ಕೆ ಕಟ್ಟುನಿಟ್ಟಿನ ಆದೇಶ!
ಕ್ರೈಂ ನ್ಯೂಸ್ದಾವಣಗೆರೆಬೆಂಗಳೂರು

ಅಕ್ರಮ ಮರಳು ದಂಧೆಗೆ ಖಾಕಿ ಕಾವಲು: ಧಂಧೆಕೋರರಿಂದ ಹಣ ಪಡೆದವರಿಗೈೆತೆ ಮಾರಿಹಬ್ಬ:  ‘ಗೂಂಡಾ ಕಾಯ್ದೆ’ ಅಸ್ತ್ರ ಪ್ರಯೋಗಕ್ಕೆ ಕಟ್ಟುನಿಟ್ಟಿನ ಆದೇಶ!

Share
ಮರಳು
Share

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹಣೆ ಹಾಗೂ ಅಂತರರಾಜ್ಯ ಸಾಗಾಣಿಕೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ) ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಐಜಿಪಿ, ಡಿಐಜಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ಸಮಗ್ರ ಸುತ್ತೋಲೆಯನ್ನು ಹೊರಡಿಸಿದ್ದಾರೆ.

‘ಶೂನ್ಯ ಸಹಿಷ್ಣುತೆ’ ನೀತಿ ಅನುಷ್ಠಾನ:

ಅಕ್ರಮ ಮರಳು ಗಣಿಗಾರಿಕೆಯು ನೈಸರ್ಗಿಕ ಪರಿಸರಕ್ಕೆ ತೀವ್ರ ಹಾನಿ ಉಂಟುಮಾಡುವುದಲ್ಲದೆ, ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಮಹತ್ತ್ವದ ರಾಜಸ್ವಕ್ಕೂ ಧಕ್ಕೆ ತರುತ್ತಿದೆ. ಹೀಗಾಗಿ ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಸರ್ಕಾರ ‘ಶೂನ್ಯ ಸಹಿಷ್ಣುತೆ’ (Zero Tolerance) ನೀತಿಯನ್ನು ಅನುಸರಿಸುತ್ತಿದ್ದು, ರಾಜ್ಯಾದ್ಯಂತ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ.

ಗೂಂಡಾ ಕಾಯ್ದೆಯಡಿ ಪ್ರಕರಣ:

ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿರುವ ಮರಳು ಮಾಫಿಯಾ ಮತ್ತು ಅಕ್ರಮ ಚಟುವಟಿಕೆಗಳ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಸಂಗ್ರಹಿಸಿ ದಿಢೀರ್ ದಾಳಿಗಳನ್ನು ನಡೆಸಬೇಕು. ನಿರಂತರವಾಗಿ ಅಕ್ರಮ ಮರಳು ದಂಧೆಯಲ್ಲಿ ತೊಡಗಿಸಿಕೊಳ್ಳುವ ನಿರಂತರ ಅಪರಾಧಿಗಳ (Habitual Offenders) ವಿರುದ್ಧ ‘ಗೂಂಡಾ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲು ಸೂಚಿಸಲಾಗಿದೆ.

ಇಲಾಖೆಗಳ ಜಂಟಿ ಸಮನ್ವಯ ಹಾಗೂ ಕಟ್ಟುನಿಟ್ಟಿನ ನಿಗಾ:

  • ಟಾಸ್ಕ್ ಫೋರ್ಸ್ ಸಕ್ರಿಯ: ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚನೆಯಾಗಿರುವ ಟಾಸ್ಕ್ ಫೋರ್ಸ್‌ಗಳನ್ನು ಸಕ್ರಿಯಗೊಳಿಸಿ ನಿರಂತರ ನಿಗಾ ವಹಿಸುವುದು.

  • ಇತರ ಇಲಾಖೆಗಳೊಂದಿಗೆ ಸಮನ್ವಯ: ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಜಂಟಿಯಾಗಿ ಅಂತರರಾಜ್ಯ ಗಡಿಭಾಗಗಳಲ್ಲಿ ಕಠಿಣ ಪರೀಕ್ಷಾ ಕೇಂದ್ರಗಳನ್ನು (Checkposts) ನಿರ್ವಹಿಸುವುದು.

  • ಮಾಸಿಕ ಪರಿಶೀಲನೆ: ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ (Crime Review Meeting) ಠಾಣಾವಾರು ಅಕ್ರಮ ಮರಳು ಪ್ರಕರಣಗಳ ಪ್ರಗತಿ ಪರಿಶೀಲನೆ ನಡೆಸುವುದು.

ಕರ್ತವ್ಯ ಲೋಪ ಎಸಗುವ ಅಧಿಕಾರಿಗಳಿಗೆ ಎಚ್ಚರಿಕೆ:

ಯಾವುದೇ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಅಥವಾ ಸಾಗಾಣಿಕೆಯನ್ನು ತಡೆಯಲು ವಿಫಲವಾದರೆ ಅಥವಾ ಅಧಿಕಾರಿಗಳ ಕಡೆಯಿಂದ ಕರ್ತವ್ಯ ಲೋಪ ಕಂಡುಬಂದರೆ, ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧವೇ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಜಿ-ಐಜಿಪಿ ಎಚ್ಚರಿಕೆ ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *